ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ರಜೆ ನೀಡಲು ಮನವಿ ಮಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ಕಾರಣಕ್ಕಾಗಿ ಜನವರಿ 22 ರಂದು ಸುಪ್ರೀಂ ಕೋರ್ಟ್ಗೆ ರಜೆ ಘೋಷಿಸಲು ಔಪಚಾರಿಕ ಮನವಿ ಮಾಡಿದ್ದಾರೆ.
ವಕೀಲ ಮಿಶ್ರಾ ಅವರು ತಮ್ಮ ಅರ್ಜಿಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಗೌರವದ ವಿಷಯ ಎಂದು ಉಲ್ಲೇಖಿಸಿದ್ದಾರೆ.
ನವೆಂಬರ್ 9, 2019 ರ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪು, ಜನವರಿ 22 ರ ಈ ಐತಿಹಾಸಿಕ ಘಟನೆ ನಡೆಯಲು ಕಾರಣವಾಗಿದೆ. ಹೀಗಾಗಿ ಎಲ್ಲಾ ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರಿಗೆ ಅವಕಾಶ ನೀಡಲು ಎಲ್ಲಾ ನ್ಯಾಯಾಲಯಗಳಿಗೆ ಪ್ರಾಣ ಪ್ರತಿಷ್ಠೆಯ ದಿನದಂದು ಅಧಿಕೃತ ರಜೆ ನೀಡಬೇಕೆಂದು ಕೋರಿದ್ದಾರೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…