ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ರಜೆ ನೀಡಲು ಮನವಿ ಮಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ಕಾರಣಕ್ಕಾಗಿ ಜನವರಿ 22 ರಂದು ಸುಪ್ರೀಂ ಕೋರ್ಟ್ಗೆ ರಜೆ ಘೋಷಿಸಲು ಔಪಚಾರಿಕ ಮನವಿ ಮಾಡಿದ್ದಾರೆ.
ವಕೀಲ ಮಿಶ್ರಾ ಅವರು ತಮ್ಮ ಅರ್ಜಿಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಗೌರವದ ವಿಷಯ ಎಂದು ಉಲ್ಲೇಖಿಸಿದ್ದಾರೆ.
ನವೆಂಬರ್ 9, 2019 ರ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪು, ಜನವರಿ 22 ರ ಈ ಐತಿಹಾಸಿಕ ಘಟನೆ ನಡೆಯಲು ಕಾರಣವಾಗಿದೆ. ಹೀಗಾಗಿ ಎಲ್ಲಾ ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರಿಗೆ ಅವಕಾಶ ನೀಡಲು ಎಲ್ಲಾ ನ್ಯಾಯಾಲಯಗಳಿಗೆ ಪ್ರಾಣ ಪ್ರತಿಷ್ಠೆಯ ದಿನದಂದು ಅಧಿಕೃತ ರಜೆ ನೀಡಬೇಕೆಂದು ಕೋರಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…