ನವದೆಹಲಿ: ಅಯೋಧ್ಯೆಯಲ್ಲಿ ಭಗವಾನ್ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಸಂದರ್ಭದಲ್ಲಿ ಜನವರಿ 22 ರಂದು ಎಲ್ಲಾ ನ್ಯಾಯಾಲಯಗಳಿಗೆ ನ್ಯಾಯಾಂಗ ರಜೆ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ ಅಧ್ಯಕ್ಷರು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ರಜೆ ನೀಡಲು ಮನವಿ ಮಾಡಿದ್ದಾರೆ.
ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ಕಾರಣಕ್ಕಾಗಿ ಜನವರಿ 22 ರಂದು ಸುಪ್ರೀಂ ಕೋರ್ಟ್ಗೆ ರಜೆ ಘೋಷಿಸಲು ಔಪಚಾರಿಕ ಮನವಿ ಮಾಡಿದ್ದಾರೆ.
ವಕೀಲ ಮಿಶ್ರಾ ಅವರು ತಮ್ಮ ಅರ್ಜಿಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ರಾಷ್ಟ್ರದ ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಗೌರವದ ವಿಷಯ ಎಂದು ಉಲ್ಲೇಖಿಸಿದ್ದಾರೆ.
ನವೆಂಬರ್ 9, 2019 ರ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪು, ಜನವರಿ 22 ರ ಈ ಐತಿಹಾಸಿಕ ಘಟನೆ ನಡೆಯಲು ಕಾರಣವಾಗಿದೆ. ಹೀಗಾಗಿ ಎಲ್ಲಾ ನ್ಯಾಯಾಂಗ ಅಧಿಕಾರಿಗಳು ಮತ್ತು ವಕೀಲರಿಗೆ ಅವಕಾಶ ನೀಡಲು ಎಲ್ಲಾ ನ್ಯಾಯಾಲಯಗಳಿಗೆ ಪ್ರಾಣ ಪ್ರತಿಷ್ಠೆಯ ದಿನದಂದು ಅಧಿಕೃತ ರಜೆ ನೀಡಬೇಕೆಂದು ಕೋರಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…