ರಾಷ್ಟ್ರೀಯ

ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ: ಸ್ಮತಿ ಇರಾನಿ

ನವದೆಹಲಿ (ಪಿಟಿಐ) : ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಅಕ್ರಮ ಬೆಟ್ಟಿಂಗ್ ದಂಧೆಯಿಂದ ಬಂದಿರುವ 500 ಕೋಟಿ ರೂಪಾಯಿ ಹವಾಲಾ ಹಣವನ್ನು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನಮ್ಮ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಜನರು ಇಂತಹ ಅಕ್ರಮಗಳನ್ನು ಕಂಡಿಲ್ಲ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಘೇ ಲ್ ಅವರು ಜನರ ಬೆಂಬಲದಿಂದ ಚುನಾವಣೆಯನ್ನು ಎದುರಿಸುತ್ತಿದ್ದಾರೆ ಹೊರತು ಹವಾಲಾ ಮತ್ತು ಬೆಟ್ಟಿಂಗ್ ಆಪರೇಟರ್‍ಗಳ ಬೆಂಬಲದಿಂದಲ್ಲ ಎಂದು ಅವರು ಆರೋಪಿಸಿದರು.

ನವೆಂಬರ್ 7 ಮತ್ತು 17 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತನ್ನನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಬಘೇಲೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಇರಾನಿ ಅವರು ಜಾರಿ ನಿರ್ದೇಶನಾಲಯದ ತನಿಖೆಯು ಛತ್ತೀಸ್‍ಗಢ ಮತ್ತು ಆಂಧ್ರಪ್ರದೇಶದ ಪೊಲೀಸರ ತನಿಖೆಯ ವಿವರಗಳನ್ನು ಆಧರಿಸಿದೆ ಎಂದಿದ್ದಾರೆ.

ತನಿಖೆಯನ್ನು ಉಲ್ಲೇಖಿಸಿ, ಅಕ್ರಮ ಬೆಟ್ಟಿಂಗ್ ಆಪರೇಟರ್‍ಗಳಿಂದ 64 ಕೋಟಿ ರೂ.ಗೂ ಹೆಚ್ಚು ರಕ್ಷಣೆ ಹಣವನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್‍ನ ಪ್ರಚಾರಕ್ಕೆ ಹಣಕ್ಕಾಗಿ ಬೆಟ್ಟಿಂಗ್ ಹಣದ ಬಳಕೆ ಮತ್ತು ಬಘೇಲ್‍ಗೆ ನೀಡಿದ ಕಿಕ್‍ಬ್ಯಾಕ್‍ಗಳ ಬಗ್ಗೆ ಆರೋಪಿಗಳ ಧ್ವನಿ ಸಂದೇಶಗಳು ಮತ್ತು ಹೇಳಿಕೆಗಳಿವೆ ಎಂದು ಅವರು ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‍ಗಢದ ಮುಖ್ಯಮಂತ್ರಿಗೆ ಇದುವರೆಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂಬ ಫೋರೆನ್ಸಿಕ್ ವಿಶ್ಲೇಷಣೆ ಮತ್ತು ಕ್ಯಾಶ್ ಕೊರಿಯರ್ ನೀಡಿದ ಹೇಳಿಕೆಯು ಆಘಾತಕಾರಿ ಆರೋಪಗಳಿಗೆ ಕಾರಣವಾಗಿದೆ ಎಂದು ಇಡಿ ಶುಕ್ರವಾರ ಹೇಳಿಕೊಂಡಿದೆ.

andolanait

Recent Posts

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 mins ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago