ನವದೆಹಲಿ: ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮುಂಬೈ-ಮಣಿಪುರ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿದೆ.
ಈ ಭಾರತ್ ಜೋಡೋ ನ್ಯಾಯ್ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಯಾತ್ರೆಯನ್ನು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿರುವುದಾಗಿ ಘೋಷಿಸಿದ್ದಾರೆ.
ಇದಕ್ಕು ಮೊದಲು ಭಾರತ್ ನ್ಯಾಯ್ ಯಾತ್ರೆ ಎಂದು ಹೆಸರಿಸಲಾಗಿತ್ತು. ಈ ಯಾತ್ರೆಯಲ್ಲಿ ಭಾಗವಹಿಸುವಂತೆ ಎಲ್ಲಾ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಲಾಗುವುದು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
6,713 ಕಿ.ಮೀ.ಗೂ ಹೆಚ್ಚು ದೂರ ಸಾಗುವ ಈ ಯಾತ್ರೆಯು ಬಸ್ಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಈ ಯಾತ್ರೆಯು 110 ಜಿಲ್ಲೆಗಳು, ಸುಮಾರು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…