ಮುಂಬೈ: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ್ ಯಾತ್ರೆ ಇಂದಿನಿಂದ (ಜನವರಿ 14) ಮಣಿಪುರದಿಂದ ಆರಂಭವಾಗಲಿದೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ಶನಿವಾರ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ನ್ಯಾಯ್ ಯಾತ್ರೆಯೂ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವಾಗಿದೆ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ಚುನಾವಣೆಗೆ ಇದು ಸಂಬಂಧ ಪಡುವುದಿಲ್ಲ. ಈ ಯಾತ್ರೆಯಲ್ಲಿ ಎಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದರು.
“ಇದು ಸೈದ್ಧಾಂತಿಕ ಯಾತ್ರೆ, ಚುನಾವಣಾ ಯಾತ್ರೆಯಲ್ಲ. ಇದೊಂದು ರಾಜಕೀಯ ರ್ಯಾಲಿಯಾಗಿದ್ದು, ರಾಜಕೀಯ ಉದ್ದೇಶದಿಂದ ರಾಜಕೀಯ ಪಕ್ಷವೊಂದು ನಡೆಸುತ್ತಿದೆ. ಸಂವಿಧಾನ, ಸಂವಿಧಾನದ ಪೀಠಿಕೆ, ತತ್ವಗಳು-ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವವನ್ನು ರಕ್ಷಿಸುವುದು ನಮ್ಮ ರಾಜಕೀಯ ಉದ್ದೇಶವಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಯಾತ್ರೆಯ ಆರಂಭಿಕ ಹಂತವಾಗಿ ಮಣಿಪುರವನ್ನು ಉದ್ದೇಶಪೂರ್ವಕ ಆಯ್ಕೆಯಾಗಿದೆ ಕಾಂಗ್ರೆಸ್ ವಿವಿಧ ಆಯ್ಕೆಗಳನ್ನು ಪರಿಗಣಿಸಿದೆ ಮತ್ತು ಅಂತಿಮವಾಗಿ, “ಇಲ್ಲಿ ಏನಾಯಿತು ಎಂಬುದರ ಬಗ್ಗೆ ನಮ್ಮ ಕಾಳಜಿಯ ಪ್ರತಿಬಿಂಬವಾಗಿ ಮಣಿಪುರದಿಂದ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…