ಬೆಂಗಳೂರು: ರಾಹುಲ್ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು.
ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್ ನೀಡಿದರು.
6700 ಕಿಮೀ, 15 ರಾಜ್ಯಗಳಲ್ಲಿ ಸಾಗಲಿದೆ ಯಾತ್ರೆ: ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ. ಕಳೆದ ವರ್ಷ ನಡೆದ ಭಾರತ್ ಜೋಡೋ ಯಾತ್ರೆಯ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ಸುತ್ತಿನ ಯಾತ್ರೆಯನ್ನು ನಡೆಸಲು ಸಜ್ಜಾಗಿದ್ದು, ಇಂದಿನಿಂದ 6713 ಕಿಲೋ ಮೀಟರ್ ನಡಿಗೆಯ ಮೂಲಕ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯಲಿದೆ.
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…
ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…
ವಾಷಿಂಗ್ಟನ್ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…
ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…
ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…
ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…