ದೇಶ ಕಂಡ ಅತ್ಯುನ್ನತ ರಾಜಕಾರಣಿಗಳಲ್ಲಿ ಒಬ್ಬರಾದ, ಬಿಜೆಪಿಯ ಭೀಷ್ಮ ಎಂದೇ ಖ್ಯಾತಿಯನ್ನು ಪಡೆದಿರುವ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರಿಗೆ ಭಾರತ ರತ್ನವನ್ನು ಘೋಷಣೆ ಮಾಡಲಾಗಿದೆ.
ಅಡ್ವಾಣಿಯವರಿಗೆ ಈ ಗೌರವ ಲಭಿಸಿದ್ದರ ಕುರಿತು ಭಾರೀ ಪ್ರಶಂಸೆ ಹಾಗೂ ಸಂತಸ ವ್ಯಕ್ತವಾಗಿದ್ದು, ಇದರ ಕುರಿತಾಗಿ ಸ್ವತಃ ಎಲ್ಕೆ ಅಡ್ವಾಣಿ ಅವರೇ ಪತ್ರ ಬರೆಯುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿ ಓರ್ವ ವ್ಯಕ್ತಿಯಾಗಿ ಮಾತ್ರ ಅಲ್ಲ, ಜೀವನದುದ್ದಕ್ಕೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಕಾರಣವಾದ ಆದರ್ಶಗಳು ಮತ್ತು ತತ್ವಗಳಿಗೆ ಸಂದ ಗೌರವ ಎಂದು ತಿಳಿಸಿದ್ದಾರೆ.
“ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ ಇಂದು ನನಗೆ ನೀಡಲಾದ ಭಾರತ ರತ್ನವನ್ನು ಸ್ವೀಕರಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ಅಡ್ವಾಣಿ ತಿಳಿಸಿದ್ದಾರೆ. 14ನೇ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸದಸ್ಯನಾಗಿ ಸೇರಿದಾಗಿನಿಂದ ನಿಸ್ವಾರ್ಥದಿಂದ ಯಾವುದೇ ಪ್ರತಿಫಲ ಬಯಸದೇ ಸೇವೆ ಸಲ್ಲಿಸಿದ್ದೇನೆ. ದೇಶಕ್ಕಾಗಿ ನನ್ನ ಜೀವ ಮುಡಿಪು ಎಂದು ಹೇಳಿದ್ದಾರೆ.
“ಈ ಜೀವನ ನನ್ನದಲ್ಲ. ನನ್ನ ಜೀವನ ದೇಶಕ್ಕಾಗಿ ಮುಡಿಪು” ಎಂದು ಉಲ್ಲೇಖಿಸಿರುವ ಅಡ್ವಾಣಿ ಈ ವೇದವಾಕ್ಯವೇ ತನ್ನ ಜೀವನಕ್ಕೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದ್ದಾರೆ. ಪಂಡಿತ್ ದೀನದಯಾಳ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ ಗೌರವಕ್ಕೆ ಪಾತ್ರನಾದ ನಾನು ಇಂದು ಆ ಇಬ್ಬರು ಗಣ್ಯ ವ್ಯಕ್ತಿಗಳನ್ನು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದಿದ್ದಾರೆ.
ತಮ್ಮ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಹಾಗೂ ಸ್ವಯಂ ಸೇವಕರಿಗೆ ಕೃತಜ್ಞತೆ ಸಲ್ಲಿಸಿದ ಅಡ್ವಾಣಿಯವರು ಪತ್ನಿ ಕಮಲಾ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೂ ಸಹ ಧನ್ಯವಾದ ಹೇಳಿದ್ದಾರೆ.
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…