ರಾಷ್ಟ್ರೀಯ

ʻಭಾರತ್‌ ಅಕ್ಕಿʼ : ಪ್ರತಿ ಕೆಜಿಗೆ 29 ರೂ. ಮಾತ್ರ!

ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ʻಭಾರತ್‌ ಬ್ರ್ಯಾಂಡ್‌ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಎಲ್ಲೇಲ್ಲಿ ಮಾರಾಟ?
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‌ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ.

andolanait

Recent Posts

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

37 mins ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

52 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

1 hour ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

3 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

3 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

3 hours ago