ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ʻಭಾರತ್ ಬ್ರ್ಯಾಂಡ್ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಎಲ್ಲೇಲ್ಲಿ ಮಾರಾಟ?
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…