ರಾಷ್ಟ್ರೀಯ

ಐಟಿಯಿಂದ ಸಾವಿರಾರು ಕೋಟಿ ತೆರಿಗ ನೋಟಿಸ್; ಕಾಂಗ್ರೆಸ್‌ ವಿರುದ್ಧ ಸದ್ಯಕ್ಕಿಲ್ಲ ಕ್ರಮ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್‌ 1) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಶ್ನಿಸಿ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಸೋಮವಾರ ನಡೆಸಿದೆ. 1,823 ಕೋಟಿ ದಂಡದ ಜೊತೆಗೆ ಇನ್ನೂ ಎರಡು ನೋಟಿಸ್‌ಗಳನ್ನು ಪಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿದ ಎರಡು ದಿನಗಳ ನಂತರ ವಿಚಾರಣೆ ನಡೆದಿದೆ.

ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾನು ಈ ವಿಷಯದಲ್ಲಿ ಹೇಳಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಒಂದು ರಾಜಕೀಯ ಪಕ್ಷವಾಗಿದ್ದು, ಚುನಾವಣೆಗಳು ನಡೆಯುತ್ತಿರುವುದರಿಂದ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಹೋಗುವುದಿಲ್ಲ ಎಂದಿದ್ದಾರೆ. ಇದಲ್ಲದೆ, ಲೋಕಸಭೆ ಚುನಾವಣೆ ಮುಗಿಯುವವರೆಗೆ ಐಟಿ ಇಲಾಖೆ ಏನನ್ನೂ ವಸೂಲಿ ಮಾಡುವುದಿಲ್ಲ ಎಂದು ಐಟಿ ಹೇಳಿರುವುದಾಗಿ ಕೇಂದ್ರ ಹೇಳಿದೆ.

ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಲಯ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

9 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

10 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

11 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

12 hours ago