ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಬಿಗ್ ರಿಲೀಫ್ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್ 1) ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಶ್ನಿಸಿ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಸೋಮವಾರ ನಡೆಸಿದೆ. 1,823 ಕೋಟಿ ದಂಡದ ಜೊತೆಗೆ ಇನ್ನೂ ಎರಡು ನೋಟಿಸ್ಗಳನ್ನು ಪಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿದ ಎರಡು ದಿನಗಳ ನಂತರ ವಿಚಾರಣೆ ನಡೆದಿದೆ.
ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾನು ಈ ವಿಷಯದಲ್ಲಿ ಹೇಳಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಒಂದು ರಾಜಕೀಯ ಪಕ್ಷವಾಗಿದ್ದು, ಚುನಾವಣೆಗಳು ನಡೆಯುತ್ತಿರುವುದರಿಂದ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಹೋಗುವುದಿಲ್ಲ ಎಂದಿದ್ದಾರೆ. ಇದಲ್ಲದೆ, ಲೋಕಸಭೆ ಚುನಾವಣೆ ಮುಗಿಯುವವರೆಗೆ ಐಟಿ ಇಲಾಖೆ ಏನನ್ನೂ ವಸೂಲಿ ಮಾಡುವುದಿಲ್ಲ ಎಂದು ಐಟಿ ಹೇಳಿರುವುದಾಗಿ ಕೇಂದ್ರ ಹೇಳಿದೆ.
ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಲಯ ತಿಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…