ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ಗೆ ಬಿಗ್ ರಿಲೀಫ್ ಸಿಕ್ಕಿದೆ. 3.500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ನಿನ್ನೆ(ಏಪ್ರಿಲ್ 1) ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಕಳುಹಿಸಿದ ನೋಟಿಸ್ ಪ್ರಶ್ನಿಸಿ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠ ಸೋಮವಾರ ನಡೆಸಿದೆ. 1,823 ಕೋಟಿ ದಂಡದ ಜೊತೆಗೆ ಇನ್ನೂ ಎರಡು ನೋಟಿಸ್ಗಳನ್ನು ಪಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿದ ಎರಡು ದಿನಗಳ ನಂತರ ವಿಚಾರಣೆ ನಡೆದಿದೆ.
ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾನು ಈ ವಿಷಯದಲ್ಲಿ ಹೇಳಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಒಂದು ರಾಜಕೀಯ ಪಕ್ಷವಾಗಿದ್ದು, ಚುನಾವಣೆಗಳು ನಡೆಯುತ್ತಿರುವುದರಿಂದ ನಾವು ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಲು ಹೋಗುವುದಿಲ್ಲ ಎಂದಿದ್ದಾರೆ. ಇದಲ್ಲದೆ, ಲೋಕಸಭೆ ಚುನಾವಣೆ ಮುಗಿಯುವವರೆಗೆ ಐಟಿ ಇಲಾಖೆ ಏನನ್ನೂ ವಸೂಲಿ ಮಾಡುವುದಿಲ್ಲ ಎಂದು ಐಟಿ ಹೇಳಿರುವುದಾಗಿ ಕೇಂದ್ರ ಹೇಳಿದೆ.
ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಜುಲೈ 24 ರಂದು ನಡೆಸಲಾಗುವುದು ಎಂದು ನ್ಯಾಯಲಯ ತಿಳಿಸಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…