ಪಾಟ್ನಾ : ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ತೋರಿಸಿದೆ ಎಂದು ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಮುಜಾಫರ್ ಜಿಲ್ಲೆಯಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಜಾತಿ ಗಣತಿ ನಡೆಸಲು , ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಎನ್ ಡಿಎ ಮಿತ್ರಪಕ್ಷವಾಗಿದ್ದಾಗ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳೆದ ವರ್ಷ ಜೆಡಿಯು ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್, ಆರ್ ಜೆಡಿ, ಎಡಪಕ್ಷಗಳ ಮಹಾಘಟಬಂಧನ್ ಜೊತೆ ಸೇರಿ ಮತ್ತೆ ಸರ್ಕಾರ ರಚಿಸಿದ್ದರು.
ವಿಪಕ್ಷಗಳ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಈ ಮೈತ್ರಿಕೂಟದ ಒಂದೇ ಒಂದು ಉದ್ದೇಶ ಅಂದರೆ ಅದು ಪ್ರಧಾನಿ ಮೋದಿ ಅವರನ್ನು ವಿರೋಧಿಸುವುದಾಗಿದೆ ಎಂದು ಆರೋಪಿಸಿದ್ದಾರೆ.
“ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ನಿಲ್ಲಿಸಬೇಕು. ವಿಪಕ್ಷಗಳ ಮೈತ್ರಿಕೂಟ ಅವರನ್ನು ಅದರ ಸಂಚಾಲಕನನ್ನಾಗಿ ಕೂಡಾ ಮಾಡಲಿಲ್ಲ” ಎಂದು ಅಮಿತ್ ಶಾ ಟೀಕಾ ಪ್ರಹಾರ ನಡೆಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…