ಪಾಟ್ನಾ : ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ತೋರಿಸಿದೆ ಎಂದು ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಮುಜಾಫರ್ ಜಿಲ್ಲೆಯಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಜಾತಿ ಗಣತಿ ನಡೆಸಲು , ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಎನ್ ಡಿಎ ಮಿತ್ರಪಕ್ಷವಾಗಿದ್ದಾಗ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳೆದ ವರ್ಷ ಜೆಡಿಯು ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್, ಆರ್ ಜೆಡಿ, ಎಡಪಕ್ಷಗಳ ಮಹಾಘಟಬಂಧನ್ ಜೊತೆ ಸೇರಿ ಮತ್ತೆ ಸರ್ಕಾರ ರಚಿಸಿದ್ದರು.
ವಿಪಕ್ಷಗಳ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಈ ಮೈತ್ರಿಕೂಟದ ಒಂದೇ ಒಂದು ಉದ್ದೇಶ ಅಂದರೆ ಅದು ಪ್ರಧಾನಿ ಮೋದಿ ಅವರನ್ನು ವಿರೋಧಿಸುವುದಾಗಿದೆ ಎಂದು ಆರೋಪಿಸಿದ್ದಾರೆ.
“ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ನಿಲ್ಲಿಸಬೇಕು. ವಿಪಕ್ಷಗಳ ಮೈತ್ರಿಕೂಟ ಅವರನ್ನು ಅದರ ಸಂಚಾಲಕನನ್ನಾಗಿ ಕೂಡಾ ಮಾಡಲಿಲ್ಲ” ಎಂದು ಅಮಿತ್ ಶಾ ಟೀಕಾ ಪ್ರಹಾರ ನಡೆಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…