ಪಾಟ್ನಾ : ಬಿಹಾರ ಜಾತಿ ಗಣತಿ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರ ಸರ್ಕಾರ ತನ್ನ ತುಷ್ಟೀಕರಣ ರಾಜಕಾರಣದ ಭಾಗವಾಗಿ ಮುಸ್ಲಿಮರು ಹಾಗೂ ಯಾದವರ ಜನಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ತೋರಿಸಿದೆ ಎಂದು ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ.
ಮುಜಾಫರ್ ಜಿಲ್ಲೆಯಲ್ಲಿ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಜಾತಿ ಗಣತಿ ನಡೆಸಲು , ನಿತೀಶ್ ಕುಮಾರ್ ಅವರ ಸಂಯುಕ್ತ ಜನತಾದಳ ಎನ್ ಡಿಎ ಮಿತ್ರಪಕ್ಷವಾಗಿದ್ದಾಗ ತೀರ್ಮಾನ ತೆಗೆದುಕೊಳ್ಳಲಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳೆದ ವರ್ಷ ಜೆಡಿಯು ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಕಾಂಗ್ರೆಸ್, ಆರ್ ಜೆಡಿ, ಎಡಪಕ್ಷಗಳ ಮಹಾಘಟಬಂಧನ್ ಜೊತೆ ಸೇರಿ ಮತ್ತೆ ಸರ್ಕಾರ ರಚಿಸಿದ್ದರು.
ವಿಪಕ್ಷಗಳ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಈ ಮೈತ್ರಿಕೂಟದ ಒಂದೇ ಒಂದು ಉದ್ದೇಶ ಅಂದರೆ ಅದು ಪ್ರಧಾನಿ ಮೋದಿ ಅವರನ್ನು ವಿರೋಧಿಸುವುದಾಗಿದೆ ಎಂದು ಆರೋಪಿಸಿದ್ದಾರೆ.
“ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ನಿಲ್ಲಿಸಬೇಕು. ವಿಪಕ್ಷಗಳ ಮೈತ್ರಿಕೂಟ ಅವರನ್ನು ಅದರ ಸಂಚಾಲಕನನ್ನಾಗಿ ಕೂಡಾ ಮಾಡಲಿಲ್ಲ” ಎಂದು ಅಮಿತ್ ಶಾ ಟೀಕಾ ಪ್ರಹಾರ ನಡೆಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಎಲ್ಲಾ 40 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…