ರಾಷ್ಟ್ರೀಯ

ಬಿಜೆಪಿ ಸಂಸದೆ ರೀಟಾ ಬಹುಗುಣಗೆ 6 ತಿಂಗಳ ಜೈಲು ಶಿಕ್ಷೆ

ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರಿಗೆ ಶುಕ್ರವಾರ ಲಕ್ನೋ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು 1,100 ರೂಪಾಯಿ ದಂಡ ವಿಧಿಸಿದೆ.

ಜನಪ್ರತಿನಿಧಿಗಳ ನ್ಯಾಯಾಲಯದ (MP-MLA ಕೋರ್ಟ್) ವಿಶೇಷ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (MP-MLA ಕೋರ್ಟ್) ಅಂಬರೀಶ್ ಕುಮಾರ್ ಶ್ರೀವಾಸ್ತವ ಅವರು ಈ ಆದೇಶ ನೀಡಿದ್ದಾರೆ.

ಕಾಂಗ್ರೆಸ್ ಪರ ಸಭೆ ನಡೆಸಿದ್ದ ರೀಟಾ ಬಹುಗುಣ
ಅಂದಹಾಗೆ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಸಂಸದೆ ಕಾಂಗ್ರೆಸ್ ಪಕ್ಷದ ಪರವಾಗಿ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ನಡೆಸಿದ್ದರು ಎನ್ನಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಪ್ರಯಾಗ್‌ರಾಜ್‌ನ ಹಾಲಿ ಬಿಜೆಪಿ ಸಂಸದೃರಾಗಿರುವ ರೀಟಾ ಬಹುಗುಣ ಜೋಶಿ ಅವರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದೆ.

ಫೆಬ್ರವರಿ 17, 2012 ರಂದು ಸಂಜೆ 6.50 ರ ಸುಮಾರಿಗೆ ಲಕ್ನೋನ ಕ್ಯಾಂಟ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೋಶಿ ಅವರು ಕೃಷ್ಣನಗರದ ಬಜರಂಗನಗರ ಪ್ರದೇಶದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ನಡೆಸುತ್ತಿದ್ದರು ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಚಾರದ ಸಮಯ ಮುಗಿದ ನಂತರವೂ ರೀಟಾ ಬಹುಗುಣ ಜೋಶಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

1 hour ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

4 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

4 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

4 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

6 hours ago