ಲೋಕಸಭೆ ಚುನಾವಣೆ ಸಮೀಸುತ್ತಿದ್ದಂತೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಭೂತ್ ಹಂತದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದ್ದು, ಇದರ ನಡುವೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ಫೆಬ್ರವರಿ 17 ಹಾಗೂ 18ರಂದು ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ. ದೆಹಲಿಯ ಭಾರತ ಮಂಟಪದಲ್ಲಿ ಈ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಗೆ ಎಲ್ಲಾ ರಾಜ್ಯಗಳ ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ.
ಸಭೆಯ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾಯಕಾರಿಣಿ ಸಭೆಯ ಮುನ್ನಾ ದಿನ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದ್ದು, ಪ್ರಧಾನ ಕಾರ್ಯದರ್ಶಿಗಳು, ಕೋಶ ಸಂಚಾಲಕರು, ಎಲ್ಲಾ ಮೋರ್ಚಗಳ ಅಧ್ಯಕ್ಷರು, ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯಿತಿಗಳ ಸದಸ್ಯರನ್ನು ಆಹ್ವಾನಿಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…