ರಾಷ್ಟ್ರೀಯ

ಕೇಜ್ರಿವಾಲ್‌ ಪತ್ನಿಯಿಂದ ವಾಟ್ಸಾಪ್‌ನಲ್ಲಿ ಆಶೀರ್ವಾದ ಅಭಿಯಾನ !

ದೆಹಲಿ: ಇಡಿ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪರ ಅವರ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್‌ ಮೂಲಕ ಕೇಜ್ರಿವಾಲ್‌ ಕೋ ಆಶೀರ್ವಾದ್‌(ಕೇಜ್ರಿವಾಲ್‌ ಅವರನ್ನು ಆಶೀರ್ವದಿಸಿ) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ದೇಶದಲ್ಲಿರುವ ದುಷ್ಟಶಕ್ತಿ ಹಾಗೂ ಸಾರ್ವಾಧಿಕಾರಿ ಶಕ್ತಿಗಳ ವಿರುದ್ಧ ಕೇಜ್ರಿವಾಲ್‌ ಹೋರಾಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಆಶೀರ್ವಾದ ಮತ್ತು ಪಾರ್ಥನೆಯ ಮೂಲಕ ಕೇಜ್ರಿವಾಲ್‌ ಅವರನ್ನು ಬೆಂಬಲಿಸುವಂತೆ ಸುನೀತಾ ಕೇಜ್ರಿವಾಲ್‌ ಕೋರಿದ್ದಾರೆ.

ನನಗೆ ಅನೇಕ ಕರೆಗಳು ಬಂದವು ಅನೇಕ ಜನರು ಅರವಿಂದ್‌ ಕೇಜ್ರಿವಾಲ್‌ಗಾಗಿ ಉಪವಾಸ ಮಾಡುತ್ತಿದ್ದರು. ೮೨೯೭೩೨೪೬೨೪ ಈ ವಾಟ್ಸಾಪ್‌ ಸಂಖ್ಯೆ ಮೂಲಕ ನಿಮ್ಮ ಪ್ರೀತಿಯ ಸಂದೇಶ ಬರೆದು ಕಳುಹಿಸಿ. ನಿಮ್ಮ ಸಂದೇಶಗಳನ್ನು ಓದುವಾಗ ಅವರಿಗೆ ಖುಷಿಯಾಗುತ್ತದೆ.

ಜೈಲಿನಲ್ಲಿರುವ ಅವರಿಗೆ ಎಲ್ಲ ಸಂದೇಶಗಳನ್ನು ತಲುಪಿಸುತ್ತೇನೆ ಎಂದು ಸುನೀತಾ ಹೇಳಿದ್ದಾರೆ. ಕೇಜ್ರಿವಾಲ್‌ ಅವರಿಗೆ ಸಂದೇಶ ಕಳುಹಿಸಲು ನೀವು ಎಎಪಿ ಕಾರ್ಯಕರ್ತರಾಗಿರಬೇಕಿಲ್ಲ. ನೀವು ಯಾವ ಪಕ್ಷದಲ್ಲಿದ್ದರೂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಂದೇಶಗಳನ್ನು ಕಳುಹಿಸಿ ಎಂದು ಸುನೀತಾ ಮನವಿ ಮಾಡಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

5 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

20 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

23 hours ago