ದೆಹಲಿ: ಇಡಿ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪರ ಅವರ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್ ಮೂಲಕ ಕೇಜ್ರಿವಾಲ್ ಕೋ ಆಶೀರ್ವಾದ್(ಕೇಜ್ರಿವಾಲ್ ಅವರನ್ನು ಆಶೀರ್ವದಿಸಿ) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ದೇಶದಲ್ಲಿರುವ ದುಷ್ಟಶಕ್ತಿ ಹಾಗೂ ಸಾರ್ವಾಧಿಕಾರಿ ಶಕ್ತಿಗಳ ವಿರುದ್ಧ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಆಶೀರ್ವಾದ ಮತ್ತು ಪಾರ್ಥನೆಯ ಮೂಲಕ ಕೇಜ್ರಿವಾಲ್ ಅವರನ್ನು ಬೆಂಬಲಿಸುವಂತೆ ಸುನೀತಾ ಕೇಜ್ರಿವಾಲ್ ಕೋರಿದ್ದಾರೆ.
ನನಗೆ ಅನೇಕ ಕರೆಗಳು ಬಂದವು ಅನೇಕ ಜನರು ಅರವಿಂದ್ ಕೇಜ್ರಿವಾಲ್ಗಾಗಿ ಉಪವಾಸ ಮಾಡುತ್ತಿದ್ದರು. ೮೨೯೭೩೨೪೬೨೪ ಈ ವಾಟ್ಸಾಪ್ ಸಂಖ್ಯೆ ಮೂಲಕ ನಿಮ್ಮ ಪ್ರೀತಿಯ ಸಂದೇಶ ಬರೆದು ಕಳುಹಿಸಿ. ನಿಮ್ಮ ಸಂದೇಶಗಳನ್ನು ಓದುವಾಗ ಅವರಿಗೆ ಖುಷಿಯಾಗುತ್ತದೆ.
ಜೈಲಿನಲ್ಲಿರುವ ಅವರಿಗೆ ಎಲ್ಲ ಸಂದೇಶಗಳನ್ನು ತಲುಪಿಸುತ್ತೇನೆ ಎಂದು ಸುನೀತಾ ಹೇಳಿದ್ದಾರೆ. ಕೇಜ್ರಿವಾಲ್ ಅವರಿಗೆ ಸಂದೇಶ ಕಳುಹಿಸಲು ನೀವು ಎಎಪಿ ಕಾರ್ಯಕರ್ತರಾಗಿರಬೇಕಿಲ್ಲ. ನೀವು ಯಾವ ಪಕ್ಷದಲ್ಲಿದ್ದರೂ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂದೇಶಗಳನ್ನು ಕಳುಹಿಸಿ ಎಂದು ಸುನೀತಾ ಮನವಿ ಮಾಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…