ದೆಹಲಿ: ಇಡಿ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪರ ಅವರ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್ ಮೂಲಕ ಕೇಜ್ರಿವಾಲ್ ಕೋ ಆಶೀರ್ವಾದ್(ಕೇಜ್ರಿವಾಲ್ ಅವರನ್ನು ಆಶೀರ್ವದಿಸಿ) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ದೇಶದಲ್ಲಿರುವ ದುಷ್ಟಶಕ್ತಿ ಹಾಗೂ ಸಾರ್ವಾಧಿಕಾರಿ ಶಕ್ತಿಗಳ ವಿರುದ್ಧ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಆಶೀರ್ವಾದ ಮತ್ತು ಪಾರ್ಥನೆಯ ಮೂಲಕ ಕೇಜ್ರಿವಾಲ್ ಅವರನ್ನು ಬೆಂಬಲಿಸುವಂತೆ ಸುನೀತಾ ಕೇಜ್ರಿವಾಲ್ ಕೋರಿದ್ದಾರೆ.
ನನಗೆ ಅನೇಕ ಕರೆಗಳು ಬಂದವು ಅನೇಕ ಜನರು ಅರವಿಂದ್ ಕೇಜ್ರಿವಾಲ್ಗಾಗಿ ಉಪವಾಸ ಮಾಡುತ್ತಿದ್ದರು. ೮೨೯೭೩೨೪೬೨೪ ಈ ವಾಟ್ಸಾಪ್ ಸಂಖ್ಯೆ ಮೂಲಕ ನಿಮ್ಮ ಪ್ರೀತಿಯ ಸಂದೇಶ ಬರೆದು ಕಳುಹಿಸಿ. ನಿಮ್ಮ ಸಂದೇಶಗಳನ್ನು ಓದುವಾಗ ಅವರಿಗೆ ಖುಷಿಯಾಗುತ್ತದೆ.
ಜೈಲಿನಲ್ಲಿರುವ ಅವರಿಗೆ ಎಲ್ಲ ಸಂದೇಶಗಳನ್ನು ತಲುಪಿಸುತ್ತೇನೆ ಎಂದು ಸುನೀತಾ ಹೇಳಿದ್ದಾರೆ. ಕೇಜ್ರಿವಾಲ್ ಅವರಿಗೆ ಸಂದೇಶ ಕಳುಹಿಸಲು ನೀವು ಎಎಪಿ ಕಾರ್ಯಕರ್ತರಾಗಿರಬೇಕಿಲ್ಲ. ನೀವು ಯಾವ ಪಕ್ಷದಲ್ಲಿದ್ದರೂ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂದೇಶಗಳನ್ನು ಕಳುಹಿಸಿ ಎಂದು ಸುನೀತಾ ಮನವಿ ಮಾಡಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…