ರಾಷ್ಟ್ರೀಯ

ಪ್ರಶ್ನೆಗಳಿಗಾಗಿ ಲಂಚ ವಿವಾದ: ಲೋಕಸಭಾ ನೀತಿಸಮಿತಿಯ ಸಭೆ ನ.9ಕ್ಕೆ ಮುಂದೂಡಿಕೆ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಳಿಗಾಗಿ ಲಂಚದ ಆರೋಪಗಳ ಕುರಿತು ಕರಡು ವರದಿಯನ್ನು ಪರಿಗಣಿಸಲು ಮತ್ತು ಅಂಗೀಕರಿಸಲು ಲೋಕಸಭಾ ನೀತಿ ಸಮಿತಿಯ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ ಕಾರಣವನ್ನು ಅಧಿಕೃತವಾಗಿ ಉಲ್ಲೇಖಿಸಲಾಗಿಲ್ಲ.

ಕರಡು ವರದಿಯನ್ನು ಅಂಗೀಕರಿಸಲು ಸಭೆಯನ್ನು ಕರೆದಿರುವುದು ಬಿಜೆಪಿ ಸಂಸದ ವಿನೋದಕುಮಾರ ಸೋನ್ಕರ್ ನೇತೃತ್ವದ ಸಮಿತಿಯು ತನ್ನ ವಿಚಾರಣೆಯನ್ನು ಪೂರ್ಣಗೊಳಿಸಿದೆ ಮತ್ತು ತನ್ನ ಶಿಫಾರಸನ್ನು ಮಾಡಲಿದೆ ಎನ್ನುವುದನ್ನು ಸೂಚಿಸುತ್ತದೆ. ನ.2ರಂದು ನಡೆದಿದ್ದ ಸಮಿತಿಯ ಹಿಂದಿನ ಸಭೆಯಲ್ಲಿ ಮೊಯಿತ್ರಾ ಅವರ ಪ್ರಯಾಣಗಳು, ಹೋಟೆಲ್ ವಾಸ್ತವ್ಯ ಮತ್ತು ದೂರವಾಣಿ ಕರೆಗಳಿಗೆ ಸಂಬಂಧಿಸಿದಂತೆ ಸೋನ್ಕರ್ ವೈಯಕ್ತಿಕ ಮತ್ತು ಅಸಭ್ಯ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಎಲ್ಲ ಐವರು ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದ್ದರು.

15 ಸದಸ್ಯರ ಸಮಿತಿಯಲ್ಲಿ ಬಿಜೆಪಿ ಸಂಸದರು ಬಹುಮತವನ್ನು ಹೊಂದಿದ್ದು, ಅದು ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ಕಠಿಣ ನಿಲುವು ತಳೆಯುವ ಸಾಧ್ಯತೆಯಿದೆ. ಹಿಂದಿನ ಸಭೆಯಲ್ಲಿ ಪ್ರತಿಪಕ್ಷ ಸದಸ್ಯರೊಂದಿಗೆ ಸಭಾತ್ಯಾಗಕ್ಕೆ ಮುನ್ನ, ಸೋನ್ಕರ್ ತನಗೆ ಕೊಳಕು ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೊಯಿತ್ರಾ ಆರೋಪಿಸಿದ್ದ ಹಿನ್ನೆಲೆಯಲ್ಲಿ ಈ ಸಾಧ್ಯತೆ ಇನ್ನಷ್ಟು ದಟ್ಟವಾಗಿದೆ.

ಪ್ರತಿಪಕ್ಷಗಳ ಸದಸ್ಯರು ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸಲ್ಲಿಸುವ ಸಾಧ್ಯತೆಯ ನಡುವೆ ಸಮಿತಿಯು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಿರುವ ತನ್ನ ವರದಿಯಲ್ಲಿ ಮೊಯಿತ್ರಾ ವಿರುದ್ಧ ಶಿಫಾರಸುಗಳನ್ನು ಮಾಡುವ ಸೂಚನೆಗಳಿವೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago