ರಾಷ್ಟ್ರೀಯ

ಯಾವುದೇ ಗೊಂದಲ ಬೇಡ, ಲೋಕಸಭೆಗೂ ಮುನ್ನ ಪೌರತ್ವ ಕಾಯ್ದೆ ಜಾರಿ: ಅಮಿತ್‌ ಶಾ

ನವದೆಹಲಿ: ಇಂದು ( ಫೆಬ್ರವರಿ 10 ) ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಅಮಿತ್‌ ಶಾ ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿಗೆ ಬರುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡʼ ಎಂದು ಹೇಳಿದರು.

ಇನ್ನೂ ಮುಂದುವರಿದು ಮಾತನಾಡಿದ ಅಮಿತ್‌ ಶಾ ಸಿಎಎ ಕಾಂಗ್ರೆಸ್‌ ಸರ್ಕಾರದ ಭರವಸೆ ಎಂದರು. ʼಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಇತರೆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅದರಿಂದ ಕಾಂಗ್ರೆಸ್ ಹಿಂದೆ ಸರಿಯುತ್ತಿದೆʼ ಎಂದರು.

ಅಲ್ಲದೇ ʼಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಪೌರತ್ವ ತಿದ್ದುಪಡಿ ಕಾಯ್ದೆಯು ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆಯಾಗಿದೆʼ ಎಂದು ಸ್ಪಷ್ಟನೆ ನೀಡಿದರು.

andolana

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago