Mysore
26
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯ ಜಾಮೀನು ರದ್ದುಗೊಳಿಸಿ: ಸುಪ್ರೀಂ ನೋಟಿಸ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಗೌರಿ ತಂಗಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್‌ ನಾಯಕ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌, ಆರೋಪಿಗೆ ಕಳೆದ ಡಿಸೆಂಬರ್‌ 7ರಂದು ಜಾಮೀನು ನೀಡಿ ಆದೇಶ ಹೊರಡಿಸಿತ್ತು.

ಆರೋಪಿ ಮೋಹನ್ ನಾಯಕ್ ಡಿಸೆಂಬರ್ 7, 2023 ರಂದು ವಿಚಾರ ವಿಳಂಬ ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ನೀಡಿತ್ತು. ಗೌರಿ ಹತ್ಯೆ ಪ್ರಕರಣದಲ್ಲಿ ನಾಯಕ್‌ 11ನೇ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!