ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ ನಾಯಕ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
2017 ರ ಸೆಪ್ಟೆಂಬರ್ 05 ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಗೌರಿ ತಂಗಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್, ಆರೋಪಿಗೆ ಕಳೆದ ಡಿಸೆಂಬರ್ 7ರಂದು ಜಾಮೀನು ನೀಡಿ ಆದೇಶ ಹೊರಡಿಸಿತ್ತು.
ಆರೋಪಿ ಮೋಹನ್ ನಾಯಕ್ ಡಿಸೆಂಬರ್ 7, 2023 ರಂದು ವಿಚಾರ ವಿಳಂಬ ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ನಿಂದ ಜಾಮೀನು ನೀಡಿತ್ತು. ಗೌರಿ ಹತ್ಯೆ ಪ್ರಕರಣದಲ್ಲಿ ನಾಯಕ್ 11ನೇ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…