7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.
ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…