7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.
ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…
ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…