7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.
ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…