ರಾಷ್ಟ್ರೀಯ

ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ರಿಲೀಫ್‌

7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.

ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್‌ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್‌ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್‌ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

35 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago