ರಾಷ್ಟ್ರೀಯ

ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ರಿಲೀಫ್‌

7.61 ಟಿಎಂಸಿ ಬಾಕಿ ಸೇರಿದಂತೆ ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಈ ಮೂಲಕ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ನಿನ್ನೆ ( ಫೆಬ್ರವರಿ 1 ) ನವದೆಹಲಿಯಲ್ಲಿ ನಡೆದ ಪ್ರಾಧಿಕಾರದ 28ನೇ ಸಭೆಯಲ್ಲಿ ಕರ್ನಾಟಕದ ವಾದಕ್ಕೆ ಸ್ಪಂದನೆ ಸಿಕ್ಕಿದೆ. ಹೀಗಾಗಿ ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಇಲ್ಲದಂತಾಗಿದೆ.

ರಾಜ್ಯದ ವಾದ: ಕರ್ನಾಟಕದ 4 ಜಲಾಶಯಗಳಿಗೆ 2023ರ ಜೂನ್‌ 1ರಿಂದ ಜನವರಿ 29ರವರೆಗೆ ಶೇ.52.44ರಷ್ಟು ಒಳಹರಿವಿನ ಕೊರತೆ ಇದೆ. ಫೆಬ್ರವರಿ ಪೂರ್ಣ ಅವಧಿಗೆ ಕರ್ನಾಟಕವು ಸುಪ್ರೀಂ ಕೋರ್ಟ್‌ ಮಾರ್ಪಡಿಸಿದಂತೆ ಕಾವೇರಿ ಜಲವಿವಾದ ನ್ಯಾಯಾಧೀಕರಣದ ಆದೇಶದಂತೆ ನಿಗದಿತ ಪ್ರಮಾಣದ ಹರಿವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಜನವರಿ 18ರಂದು ನಡೆದಿದ್ದ ಸಭೆಯಲ್ಲಿ ನಿರ್ಧರಿಸಿತ್ತು. ಬಿಳಿಗುಂಡ್ಲುವಿನಲ್ಲಿ ಹರಿವು ಸ್ಥಿರವಾಗಿರುವುದರಿಂದ ಅಲ್ಲಿವರೆಗಿನ ಹರಿವು ಸಾಮಾನ್ಯವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಆದರೆ ಡಿಸೆಂಬರ್‌ 19ರಿಂದ ಜನವರಿ 28ರವರೆಗೆ ಕರ್ನಾಟಕದ ಜಲಾಶಯಗಳಲ್ಲಿ ಶೇ. 52.46ರಷ್ಟು ಒಳಹರಿವಿನ ಕೊರತೆ ಇದೆ ಎಂದು ಕರ್ನಾಟಕ ವಾದ ಮಂಡಿಸಿತು.

andolana

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

14 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

47 mins ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

2 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

3 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

4 hours ago