ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
ಅದರ ಭಾಗವಾಗಿ ನಿನ್ನೆ ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು.
ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.
ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.
ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…