ರಾಷ್ಟ್ರೀಯ

ಬುರ್ಜ್ ಖಲೀಫಾದಲ್ಲಿ ಸಿಸಿಎಲ್ ಪ್ರೋಮೋ ಝಲಕ್ !

ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

ಅದರ ಭಾಗವಾಗಿ ನಿನ್ನೆ  ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು.

ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್‌ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.

ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.

ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.

andolanait

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

1 hour ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

1 hour ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

2 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

2 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

2 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

2 hours ago