ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.
ಅದರ ಭಾಗವಾಗಿ ನಿನ್ನೆ ದುಬೈನಲ್ಲಿ ಪ್ರೋಮೋ ಬಿಡುಗಡೆ ಮಾಡುವ ಮೂಲಕ ಸಿಸಿಎಲ್ ಗೆ ಚಾಲನೆ ನೀಡಲಾಗಿದೆ. ಬುರ್ಜ್ ಖಲೀಫಾದಲ್ಲಿ ಕಟ್ಟಡದ ಮೇಲೆ ಸಿಸಿಎಲ್ ಪ್ರೋಮೋ ಝಲಕ್ ಪ್ರದರ್ಶಿಸಲಾಯಿತು.
ಈ ದೃಶ್ಯವನ್ನು ಕಣ್ತುಂಬಿಕೊಂಡ ಸ್ಟಾರ್ಟ್ ರೋಮಾಂಚನಗೊಂಡರು. ಪ್ರೋಮೋ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡದಿಂದ ಕಿಚ್ಚ ಸುದೀಪ್, ಹಿಂದಿಯಿಂದ ಸೊಹೈಲ್ ಖಾನ್ , ತಮಿಳುಚಿತ್ರರಂಗದಿಂದ ಆರ್ಯ ಮತ್ತು ಜೀವಾ , ತೆಲುಗಿನಿಂದ ತಮನ್ ಮತ್ತು ಸುಧೀರ್ ಬಾಬು, ಬಂಗಾಳಿಯಿಂದ ಜಿಸ್ಸು ಸೇನ್ಗುಪ್ತಾ , ಪಂಜಾಬಿಯಿಂದ ಬುನ್ನು ಧಿಲ್ಲೋನ್ ಮತ್ತು ಸೋನು ಸೂದ್, ಮಲಯಾಳಂನಿಂದ ಇಂದ್ರಜಿತ್ ಸುಕುಮಾರನ್ ಮತ್ತು ಉನ್ನಿ ಮುಕುಂದನ್ ಸೇರಿದಂತೆ CCL ನ ಎಲ್ಲಾ 8 ತಂಡಗಳ ನಾಯಕರು ಹಾಗೂ ಸೂಪರ್ ಸ್ಟಾರ್ಸ್ ಭಾಗಿಯಾಗಿದ್ದರು.
ಸಿಸಿಎಲ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿರುವ ವಿಷ್ಣು ವರ್ಧನ್ ಇಂದೂರಿ ಮಾತನಾಡಿ, ಸಿಸಿಎಲ್ ಮನರಂಜನಾತ್ಮಕ ಕ್ರೀಡೆಯಾಗಿದ್ದು, ಎಲ್ಲಾ ಸ್ಟಾರ್ ಅವರ ಬ್ಯುಸಿ ಶೆಡ್ಯುಲ್ಡ್ ನಡುವೆ ಕ್ರಿಕೆಟ್ ನಲ್ಲಿ ಭಾಗಿಯಾಗಿಯಾಗುತ್ತಾರೆ ಎಂದರು.
ಕಿಚ್ಚ ಸುದೀಪ್ ಮಾತಾನಾಡಿ, ನಾನು ಈ ಹಿಂದೆ ಸಿನಿಮಾಗಾಗಿ ಬುರ್ಜ್ ಖಲೀಫ್ ದಲ್ಲಿದ್ದೆ. ಆದರೆ ಈಗ ಕ್ರಿಕೆಟ್ ಗಾಗಿ ಇಲ್ಲಿರುವುದು ವಿಶೇಷ ಹಾಗೂ ಮರೆಯಲಾಗದ ಸಂಗತಿ ಎಂದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…