ರಾಷ್ಟ್ರೀಯ

ಜಾರ್ಖಂಡ್‌ ನೂತನ ಸಿಎಂ ಆಗಿ ಚಂಪೈ ಸೊರೇನ್‌ ಪ್ರಮಾಣವಚನ ಸ್ವೀಕಾರ

ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ ಅವರಿಗೆ ಆಹ್ವಾನ ನೀಡಿದ್ದರು. ಅದರಂತೆ 67 ವಯಸ್ಸಿನ ಚಂಪೈ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.

ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರು ಶಾಸಕರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಂದು ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ.

ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಉನ್ನತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಅವರು 600 ಕೋಟಿ ರೂ. ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago