ರಾಂಚಿ: ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ ಅವರಿಗೆ ಆಹ್ವಾನ ನೀಡಿದ್ದರು. ಅದರಂತೆ 67 ವಯಸ್ಸಿನ ಚಂಪೈ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಜಾರ್ಖಂಡ್ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.
ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರು ಶಾಸಕರನ್ನು ಹೊಂದಿದೆ. ಎನ್ಸಿಪಿ ಮತ್ತು ಎಡಪಕ್ಷಗಳು ತಲಾ ಒಂದು ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ.
ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಉನ್ನತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಅವರು 600 ಕೋಟಿ ರೂ. ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…