ರಾಷ್ಟ್ರೀಯ

ಹಣ ಪಾವತಿ ಕುರಿತು ಛತ್ತೀಸಗಢ ಸಿಎಂ ಮೇಲೆ ಆರೋಪ ಮಾಡಿಲ್ಲ: ಅಸೀಮ್‌ ದಾಸ್‌

ನವದೆಹಲಿ : ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಅಸೀಮ್‌ ದಾಸ್‌ ತನ್ನ ಹೇಳಿಕೆಯನ್ನು ಬದಲಿಸಿದ್ದು, ತಾನು ಛತ್ತೀಸಗಢ ಸಿಎಂ ಮೇಲೆ ಹಣ ಪಾವತಿ ಕುರಿತು ಆರೋಪ ಮಾಡಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾನೆ.

ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ೫೦೮ ಕೋಟಿ ರೂ ಹಣವನ್ನು ಸಿಎಂ ಭೂಪೇಶ್‌ ಬಾಘೇಲ್‌ ಅವರು ಆಸೀಮ್‌ ದಾಸ್ ಮೂಲಕ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಹಿನ್ನೆಲೆಯಲ್ಲಿ ದಾಸ್‌ ರನ್ನು ಇಡಿ ಬಂಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ಬದಲಿಸಿರುವ ದಾಸ್‌, ತಾನು ಯಾವತ್ತೂ ರಾಜಕಾರಣಿಗಳಿಗೆ ನಗದು ನೀಡಿಲ್ಲ. ನನ್ನನ್ನು ಬಲವಂತವಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಸಿಎಂ ಭಾಘೇಲ್‌ ವಿರುದ್ಧ ನಾನು ಯಾವುದೇ ಹಣದ ಆರೋಪ ಮಾಡಿಲ್ಲ. ಅಧಿಕಾರಿಗಳು ಇಂಗ್ಲಿಷ್‌ನಲ್ಲಿ ಬರೆಯಲಾದ ಹೇಳಿಕೆಯೊಂದರಲ್ಲಿ ನನ್ನ ಸಹಿ ಪಡೆದಿದ್ದಾರೆ. ನನಗೆ ಇಂಗ್ಲಿಷ್‌ ಬರುವುದಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಈ ಆಕ್ರಮ ಆ್ಯಪ್ ನ ಹಿಂದಿನ ವ್ಯಕ್ತಿ ಶುಭಂ ಸೋನಿ ತನ್ನ ಬಾಲ್ಯದ ಗೆಳೆಯ, ಆತನ ಒತ್ತಾಯದ ಮೇರೆಗೆ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎರಡು ಬಾರಿ ದುಬೈಗೆ ಭೇಟಿ ನೀಡಿದ್ದಾಗಿ ಆತ ಹೇಳಿದ್ದಾನೆ.

ಸೋನಿಗೆ ಛತ್ತೀಸಗಢದಲ್ಲಿ ನಿರ್ಮಾಣ ಕ್ಷೇತ್ರದ ವ್ಯವಹಾರ ನಡೆಸುವ ಆಸಕ್ತಿಯಿತ್ತು. ಅದಕ್ಕಾಗಿ ಕೆಲಸ ಮಾಡುವಂತೆ ತನ್ನನ್ನು ಕೇಳಿದ್ದ ಹಾಗೂ ಹಣಕಾಸಿನ ವ್ಯವಸ್ಥೆಯ ಬಗ್ಗೆಯೂ ಆಶ್ವಾಸನೆ ನೀಡಿದ್ದ ಎಂದು ಸೋನಿ ತನ್ನ ಪತ್ರದಲ್ಲಿ ಹೇಳಿದ್ದಾನೆ.

“ನಾನು ರಾಯಪುರ್ ವಿಮಾನ ನಿಲ್ದಾಣ ತಲುಪಿದಾಗ, ನನಗೆ ಕಾರೊಂದರಲ್ಲಿ ವಿಐಪಿ ರಸ್ತೆಯಲ್ಲಿರುವ ಹೋಟೆಲ್‌ಗೆ ಹೋಗುವಂತೆ ತಿಳಿಸಲಾಗಿತ್ತು. ಕಾರನ್ನು ಒಂದು ನಿರ್ದಿಷ್ಟ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚಿಸಲಾಯಿತು ಅಲ್ಲಿ ಒಬ್ಬ ವ್ಯಕ್ತಿ ನಗದು ತುಂಬಿದ ಚೀಲಗಳನ್ನು ಕಾರಿನಲ್ಲಿರಿಸಿರಿಸಿದ್ದಾರೆ, ಹೋಟೆಲ್ ಕೊಠಡಿಗೆ ತೆರಳುವಂತೆ ನನಗೆ ನಂತರ ಫೋನ್ ಮೂಲಕ ಸೂಚಿಸಲಾಯಿತು.

ಸ್ವಲ್ಪ ಹೊತ್ತಿನಲ್ಲಿ ಈಡಿ ಅಧಿಕಾರಿಗಳು ನನ್ನ ಕೊಠಡಿಗೆ ಬಂದು ನನ್ನನ್ನು ಕರೆದುಕೊಂಡು ಹೋದರು. ನನ್ನನ್ನು ಸಿಲುಕಿಸಲಾಗಿದೆ ಎಂದು ನಂತರ ನನಗೆ ತಿಳಿಯಿತು. ನಾನು ಯಾರಿಗೂ ಹಣಕಾಸಿನ ಸಹಾಯ ಮಾಡಿಲ್ಲ ಅಥವಾ ಯಾವುದೇ ರಾಜಕೀಯ ಮುಖಂಡರು ಅಥವಾ ಕಾರ್ಯಕರ್ತರಿಗೆ ಹಣ ನೀಡಿಲ್ಲ” ಎಂದು ದಾಸ್ ತನ್ನ ಪತ್ರದಲ್ಲಿ ತಿಳಿಸಿದ್ದಾನೆ.

andolanait

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

2 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

2 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago