ರಾಷ್ಟ್ರೀಯ

ಹಣ ಪಾವತಿ ಕುರಿತು ಛತ್ತೀಸಗಢ ಸಿಎಂ ಮೇಲೆ ಆರೋಪ ಮಾಡಿಲ್ಲ: ಅಸೀಮ್‌ ದಾಸ್‌

ನವದೆಹಲಿ : ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಅಸೀಮ್‌ ದಾಸ್‌ ತನ್ನ ಹೇಳಿಕೆಯನ್ನು ಬದಲಿಸಿದ್ದು, ತಾನು ಛತ್ತೀಸಗಢ ಸಿಎಂ ಮೇಲೆ ಹಣ ಪಾವತಿ ಕುರಿತು ಆರೋಪ ಮಾಡಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾನೆ.

ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ೫೦೮ ಕೋಟಿ ರೂ ಹಣವನ್ನು ಸಿಎಂ ಭೂಪೇಶ್‌ ಬಾಘೇಲ್‌ ಅವರು ಆಸೀಮ್‌ ದಾಸ್ ಮೂಲಕ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಹಿನ್ನೆಲೆಯಲ್ಲಿ ದಾಸ್‌ ರನ್ನು ಇಡಿ ಬಂಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ಬದಲಿಸಿರುವ ದಾಸ್‌, ತಾನು ಯಾವತ್ತೂ ರಾಜಕಾರಣಿಗಳಿಗೆ ನಗದು ನೀಡಿಲ್ಲ. ನನ್ನನ್ನು ಬಲವಂತವಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಸಿಎಂ ಭಾಘೇಲ್‌ ವಿರುದ್ಧ ನಾನು ಯಾವುದೇ ಹಣದ ಆರೋಪ ಮಾಡಿಲ್ಲ. ಅಧಿಕಾರಿಗಳು ಇಂಗ್ಲಿಷ್‌ನಲ್ಲಿ ಬರೆಯಲಾದ ಹೇಳಿಕೆಯೊಂದರಲ್ಲಿ ನನ್ನ ಸಹಿ ಪಡೆದಿದ್ದಾರೆ. ನನಗೆ ಇಂಗ್ಲಿಷ್‌ ಬರುವುದಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಈ ಆಕ್ರಮ ಆ್ಯಪ್ ನ ಹಿಂದಿನ ವ್ಯಕ್ತಿ ಶುಭಂ ಸೋನಿ ತನ್ನ ಬಾಲ್ಯದ ಗೆಳೆಯ, ಆತನ ಒತ್ತಾಯದ ಮೇರೆಗೆ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎರಡು ಬಾರಿ ದುಬೈಗೆ ಭೇಟಿ ನೀಡಿದ್ದಾಗಿ ಆತ ಹೇಳಿದ್ದಾನೆ.

ಸೋನಿಗೆ ಛತ್ತೀಸಗಢದಲ್ಲಿ ನಿರ್ಮಾಣ ಕ್ಷೇತ್ರದ ವ್ಯವಹಾರ ನಡೆಸುವ ಆಸಕ್ತಿಯಿತ್ತು. ಅದಕ್ಕಾಗಿ ಕೆಲಸ ಮಾಡುವಂತೆ ತನ್ನನ್ನು ಕೇಳಿದ್ದ ಹಾಗೂ ಹಣಕಾಸಿನ ವ್ಯವಸ್ಥೆಯ ಬಗ್ಗೆಯೂ ಆಶ್ವಾಸನೆ ನೀಡಿದ್ದ ಎಂದು ಸೋನಿ ತನ್ನ ಪತ್ರದಲ್ಲಿ ಹೇಳಿದ್ದಾನೆ.

“ನಾನು ರಾಯಪುರ್ ವಿಮಾನ ನಿಲ್ದಾಣ ತಲುಪಿದಾಗ, ನನಗೆ ಕಾರೊಂದರಲ್ಲಿ ವಿಐಪಿ ರಸ್ತೆಯಲ್ಲಿರುವ ಹೋಟೆಲ್‌ಗೆ ಹೋಗುವಂತೆ ತಿಳಿಸಲಾಗಿತ್ತು. ಕಾರನ್ನು ಒಂದು ನಿರ್ದಿಷ್ಟ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚಿಸಲಾಯಿತು ಅಲ್ಲಿ ಒಬ್ಬ ವ್ಯಕ್ತಿ ನಗದು ತುಂಬಿದ ಚೀಲಗಳನ್ನು ಕಾರಿನಲ್ಲಿರಿಸಿರಿಸಿದ್ದಾರೆ, ಹೋಟೆಲ್ ಕೊಠಡಿಗೆ ತೆರಳುವಂತೆ ನನಗೆ ನಂತರ ಫೋನ್ ಮೂಲಕ ಸೂಚಿಸಲಾಯಿತು.

ಸ್ವಲ್ಪ ಹೊತ್ತಿನಲ್ಲಿ ಈಡಿ ಅಧಿಕಾರಿಗಳು ನನ್ನ ಕೊಠಡಿಗೆ ಬಂದು ನನ್ನನ್ನು ಕರೆದುಕೊಂಡು ಹೋದರು. ನನ್ನನ್ನು ಸಿಲುಕಿಸಲಾಗಿದೆ ಎಂದು ನಂತರ ನನಗೆ ತಿಳಿಯಿತು. ನಾನು ಯಾರಿಗೂ ಹಣಕಾಸಿನ ಸಹಾಯ ಮಾಡಿಲ್ಲ ಅಥವಾ ಯಾವುದೇ ರಾಜಕೀಯ ಮುಖಂಡರು ಅಥವಾ ಕಾರ್ಯಕರ್ತರಿಗೆ ಹಣ ನೀಡಿಲ್ಲ” ಎಂದು ದಾಸ್ ತನ್ನ ಪತ್ರದಲ್ಲಿ ತಿಳಿಸಿದ್ದಾನೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago