ರಾಷ್ಟ್ರೀಯ

ಹಣ ಪಾವತಿ ಕುರಿತು ಛತ್ತೀಸಗಢ ಸಿಎಂ ಮೇಲೆ ಆರೋಪ ಮಾಡಿಲ್ಲ: ಅಸೀಮ್‌ ದಾಸ್‌

ನವದೆಹಲಿ : ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ಬಂಧಿತರಾಗಿರುವ ಅಸೀಮ್‌ ದಾಸ್‌ ತನ್ನ ಹೇಳಿಕೆಯನ್ನು ಬದಲಿಸಿದ್ದು, ತಾನು ಛತ್ತೀಸಗಢ ಸಿಎಂ ಮೇಲೆ ಹಣ ಪಾವತಿ ಕುರಿತು ಆರೋಪ ಮಾಡಿಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾನೆ.

ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣದಲ್ಲಿ ೫೦೮ ಕೋಟಿ ರೂ ಹಣವನ್ನು ಸಿಎಂ ಭೂಪೇಶ್‌ ಬಾಘೇಲ್‌ ಅವರು ಆಸೀಮ್‌ ದಾಸ್ ಮೂಲಕ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಹಿನ್ನೆಲೆಯಲ್ಲಿ ದಾಸ್‌ ರನ್ನು ಇಡಿ ಬಂಧಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ಬದಲಿಸಿರುವ ದಾಸ್‌, ತಾನು ಯಾವತ್ತೂ ರಾಜಕಾರಣಿಗಳಿಗೆ ನಗದು ನೀಡಿಲ್ಲ. ನನ್ನನ್ನು ಬಲವಂತವಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಸಿಎಂ ಭಾಘೇಲ್‌ ವಿರುದ್ಧ ನಾನು ಯಾವುದೇ ಹಣದ ಆರೋಪ ಮಾಡಿಲ್ಲ. ಅಧಿಕಾರಿಗಳು ಇಂಗ್ಲಿಷ್‌ನಲ್ಲಿ ಬರೆಯಲಾದ ಹೇಳಿಕೆಯೊಂದರಲ್ಲಿ ನನ್ನ ಸಹಿ ಪಡೆದಿದ್ದಾರೆ. ನನಗೆ ಇಂಗ್ಲಿಷ್‌ ಬರುವುದಿಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಈ ಆಕ್ರಮ ಆ್ಯಪ್ ನ ಹಿಂದಿನ ವ್ಯಕ್ತಿ ಶುಭಂ ಸೋನಿ ತನ್ನ ಬಾಲ್ಯದ ಗೆಳೆಯ, ಆತನ ಒತ್ತಾಯದ ಮೇರೆಗೆ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಎರಡು ಬಾರಿ ದುಬೈಗೆ ಭೇಟಿ ನೀಡಿದ್ದಾಗಿ ಆತ ಹೇಳಿದ್ದಾನೆ.

ಸೋನಿಗೆ ಛತ್ತೀಸಗಢದಲ್ಲಿ ನಿರ್ಮಾಣ ಕ್ಷೇತ್ರದ ವ್ಯವಹಾರ ನಡೆಸುವ ಆಸಕ್ತಿಯಿತ್ತು. ಅದಕ್ಕಾಗಿ ಕೆಲಸ ಮಾಡುವಂತೆ ತನ್ನನ್ನು ಕೇಳಿದ್ದ ಹಾಗೂ ಹಣಕಾಸಿನ ವ್ಯವಸ್ಥೆಯ ಬಗ್ಗೆಯೂ ಆಶ್ವಾಸನೆ ನೀಡಿದ್ದ ಎಂದು ಸೋನಿ ತನ್ನ ಪತ್ರದಲ್ಲಿ ಹೇಳಿದ್ದಾನೆ.

“ನಾನು ರಾಯಪುರ್ ವಿಮಾನ ನಿಲ್ದಾಣ ತಲುಪಿದಾಗ, ನನಗೆ ಕಾರೊಂದರಲ್ಲಿ ವಿಐಪಿ ರಸ್ತೆಯಲ್ಲಿರುವ ಹೋಟೆಲ್‌ಗೆ ಹೋಗುವಂತೆ ತಿಳಿಸಲಾಗಿತ್ತು. ಕಾರನ್ನು ಒಂದು ನಿರ್ದಿಷ್ಟ ಸ್ಥಳದಲ್ಲಿ ನಿಲ್ಲಿಸುವಂತೆ ಸೂಚಿಸಲಾಯಿತು ಅಲ್ಲಿ ಒಬ್ಬ ವ್ಯಕ್ತಿ ನಗದು ತುಂಬಿದ ಚೀಲಗಳನ್ನು ಕಾರಿನಲ್ಲಿರಿಸಿರಿಸಿದ್ದಾರೆ, ಹೋಟೆಲ್ ಕೊಠಡಿಗೆ ತೆರಳುವಂತೆ ನನಗೆ ನಂತರ ಫೋನ್ ಮೂಲಕ ಸೂಚಿಸಲಾಯಿತು.

ಸ್ವಲ್ಪ ಹೊತ್ತಿನಲ್ಲಿ ಈಡಿ ಅಧಿಕಾರಿಗಳು ನನ್ನ ಕೊಠಡಿಗೆ ಬಂದು ನನ್ನನ್ನು ಕರೆದುಕೊಂಡು ಹೋದರು. ನನ್ನನ್ನು ಸಿಲುಕಿಸಲಾಗಿದೆ ಎಂದು ನಂತರ ನನಗೆ ತಿಳಿಯಿತು. ನಾನು ಯಾರಿಗೂ ಹಣಕಾಸಿನ ಸಹಾಯ ಮಾಡಿಲ್ಲ ಅಥವಾ ಯಾವುದೇ ರಾಜಕೀಯ ಮುಖಂಡರು ಅಥವಾ ಕಾರ್ಯಕರ್ತರಿಗೆ ಹಣ ನೀಡಿಲ್ಲ” ಎಂದು ದಾಸ್ ತನ್ನ ಪತ್ರದಲ್ಲಿ ತಿಳಿಸಿದ್ದಾನೆ.

andolanait

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

16 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

24 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

30 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

36 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago