ರಾಯಪುರ : ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಸರ್ಕಾರ ಬಂದರೆ ಮುಂದಿನ ಐದು ವರ್ಷಗಳಲ್ಲಿ ಛತ್ತೀಸ್ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ಛತ್ತೀಸ್ಗಢದ ಜನರಿಗೆ ಬಿಜೆಪಿ ನೀಡಿರುವ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ ಶಾ, “ಛತ್ತೀಸ್ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ಉನ್ನತಿ ಯೋಜನೆಯನ್ನು ಪ್ರಾರಂಭಿ ಸಲಾಗುವುದು, ಇದರ ಭಾಗವಾಗಿ ರೂ. 3,100ರ ದರಲಲ್ಲಿ 21 ಕ್ವಿಂಟಾಲ್ ಅಥವಾ ಎಕರೆ ಭತ್ತವನ್ನು ಖರೀದಿಸುತ್ತೇವೆ. ಖರೀದಿಯಿಂದ ಸಂಗ್ರಹಿಸಿದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
“ಸರ್ಕಾರಿ ಕಚೇರಿಗಳಲ್ಲಿ ಖಾಯಿಯಿರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಗಳನ್ನು ನೀಡಲಾಗುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಾಗೂ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ ನಿರ್ಧರಿಸಿದ್ದೇವೆ. ಭೂರಹಿತ ರೈತರಿಗೆ ವಾರ್ಷಿಕ 10,000 ರೂ ಅನುದಾನ ನೀಡುತ್ತೇವೆ ಮತ್ತು ರಾಜ್ಯಾದ್ಯಂತ 500 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಅವರು ಹೇಳಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…