ರಾಯಪುರ : ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಸರ್ಕಾರ ಬಂದರೆ ಮುಂದಿನ ಐದು ವರ್ಷಗಳಲ್ಲಿ ಛತ್ತೀಸ್ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ಛತ್ತೀಸ್ಗಢದ ಜನರಿಗೆ ಬಿಜೆಪಿ ನೀಡಿರುವ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ ಶಾ, “ಛತ್ತೀಸ್ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ಉನ್ನತಿ ಯೋಜನೆಯನ್ನು ಪ್ರಾರಂಭಿ ಸಲಾಗುವುದು, ಇದರ ಭಾಗವಾಗಿ ರೂ. 3,100ರ ದರಲಲ್ಲಿ 21 ಕ್ವಿಂಟಾಲ್ ಅಥವಾ ಎಕರೆ ಭತ್ತವನ್ನು ಖರೀದಿಸುತ್ತೇವೆ. ಖರೀದಿಯಿಂದ ಸಂಗ್ರಹಿಸಿದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
“ಸರ್ಕಾರಿ ಕಚೇರಿಗಳಲ್ಲಿ ಖಾಯಿಯಿರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಗಳನ್ನು ನೀಡಲಾಗುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಾಗೂ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ ನಿರ್ಧರಿಸಿದ್ದೇವೆ. ಭೂರಹಿತ ರೈತರಿಗೆ ವಾರ್ಷಿಕ 10,000 ರೂ ಅನುದಾನ ನೀಡುತ್ತೇವೆ ಮತ್ತು ರಾಜ್ಯಾದ್ಯಂತ 500 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…