ರಾಯಪುರ : ಮುಂಬರುವ ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಸರ್ಕಾರ ಬಂದರೆ ಮುಂದಿನ ಐದು ವರ್ಷಗಳಲ್ಲಿ ಛತ್ತೀಸ್ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡಲಾಗುವುದು ಎಂದರು. 90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
‘ಮೋದಿ ಕಿ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯಲ್ಲಿ ಛತ್ತೀಸ್ಗಢದ ಜನರಿಗೆ ಬಿಜೆಪಿ ನೀಡಿರುವ ಕೆಲವು ಪ್ರಮುಖ ಭರವಸೆಗಳನ್ನು ನೀಡಿದ ಶಾ, “ಛತ್ತೀಸ್ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಕೃಷಿ ಉನ್ನತಿ ಯೋಜನೆಯನ್ನು ಪ್ರಾರಂಭಿ ಸಲಾಗುವುದು, ಇದರ ಭಾಗವಾಗಿ ರೂ. 3,100ರ ದರಲಲ್ಲಿ 21 ಕ್ವಿಂಟಾಲ್ ಅಥವಾ ಎಕರೆ ಭತ್ತವನ್ನು ಖರೀದಿಸುತ್ತೇವೆ. ಖರೀದಿಯಿಂದ ಸಂಗ್ರಹಿಸಿದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು.
“ಸರ್ಕಾರಿ ಕಚೇರಿಗಳಲ್ಲಿ ಖಾಯಿಯಿರುವ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಎಲ್ಲಾ ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಗಳನ್ನು ನೀಡಲಾಗುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ ಹಾಗೂ ಪ್ರತಿ ಮನೆಗೂ ಕುಡಿಯುವ ನೀರು ಪೂರೈಕೆಗೆ ನಿರ್ಧರಿಸಿದ್ದೇವೆ. ಭೂರಹಿತ ರೈತರಿಗೆ ವಾರ್ಷಿಕ 10,000 ರೂ ಅನುದಾನ ನೀಡುತ್ತೇವೆ ಮತ್ತು ರಾಜ್ಯಾದ್ಯಂತ 500 ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುತ್ತೇವೆ ಎಂದು ಅವರು ಹೇಳಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…