ರಾಷ್ಟ್ರೀಯ

ದೆಹಲಿ ಸಿಎಂ ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ: ತಿಹಾರ್‌ ಜೈಲಿಗೆ ಶಿಫ್ಟ್!

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ರೋಸ್‌ ಅವೆನ್ಯೂ ಕೋರ್ಟ್‌ ಇಂದು (ಏ.೧) ಮತ್ತೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ  ವಿಧಿಸಿದೆ.

ಕೇಜ್ರಿವಾಲ್‌ರನ್ನು ತಿಹಾರ್‌ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್‌ ಆದೇಶಿಸಿದ್ದು, ಇದರಂತೆ ತಿಹಾರ್‌ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರ ವಾದದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್‌ ಅವರನ್ನು ಏಪ್ರಿಲ್‌ 15 ರವರೆಗೆ ನ್ಯಾಯಾಂಗ ಬಂಧವನ್ನು ಮುಂದುವರೆಸುವಂತೆ  ಆದೇಶಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

5 mins ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

17 mins ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

44 mins ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

51 mins ago

ಓದುಗರ ಪತ್ರ: ಬೇಸಿಗೆ ರಜೆ ಅರ್ಥಪೂರ್ಣವಾಗಿರಲಿ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…

1 hour ago

ಓದುಗರ ಪತ್ರ: ಭಾರತದಲ್ಲಿ ಹೀಗೆ ಪ್ರತಿಭಟನೆ ಸಾಧ್ಯವೇ?

ದೇಶವೊಂದರ ಮುಖ್ಯಸ್ಥ ಇನ್ನೊಂದು ದೇಶದ ವಿರುದ್ಧ ಯುದ್ಧ ಸಾರಿದ್ದಾರೆ. ಈ ಸಂಘರ್ಷದಲ್ಲಿ ತಮ್ಮ ಜನರೂ ಪ್ರಾಣ ಕಳೆದುಕೊಳ್ಳುತ್ತಾರೆ ಎಂಬುದರ ಅರಿವಿದ್ದರೂ…

1 hour ago