ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ರೋಸ್ ಅವೆನ್ಯೂ ಕೋರ್ಟ್ ಇಂದು (ಏ.೧) ಮತ್ತೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.
ಕೇಜ್ರಿವಾಲ್ರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಂತೆ ಕೋರ್ಟ್ ಆದೇಶಿಸಿದ್ದು, ಇದರಂತೆ ತಿಹಾರ್ ಜೈಲಿಗೆ ಸ್ಥಳಾಂತರಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ದೆಹಲಿ ಮದ್ಯ ಹಗರಣ ಪ್ರಕರಣದ ಆರೋಪದ ಮೇಲೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತು. ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಒಂದು ವಾರ ಇಡಿ ಕಸ್ಟಡಿಗೆ ಒಪ್ಪಿಸಿದೆ. ವಾರದ ಕಸ್ಟಡಿ ಅಂತ್ಯಗೊಂಡ ಬಳಿಕ ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಇಂದು(ಸೋಮವಾರ) ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯ ಇರುವ ನಿಟ್ಟಿನಲ್ಲಿ ಇಡಿ ಪರ ವಕೀಲರ ವಾದದ ನಿಟ್ಟಿನಲ್ಲಿ ಆದೇಶ ಹೊರಡಿಸಿದ ನ್ಯಾಯಾಲಯ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧವನ್ನು ಮುಂದುವರೆಸುವಂತೆ ಆದೇಶಿಸಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…