ರಾಷ್ಟ್ರೀಯ

ನನ್ನ ಮೇಲೆ ದಾಳಿಗೆ ಸಿಎಂ ಪಿಣರಾಯಿ ಸಂಚು: ಕೇರಳ ರಾಜ್ಯಪಾಲ ಗಂಭೀರ ಆರೋಪ

ತಿರುವನಂತಪುರಂ : ತಮಗೆ ದೈಹಿಕವಾಗಿ ಹಾನಿ ಮಾಡಲು ಪಿಣರಾಯಿ ವಿಜಯನ್ ಅವರು ಸಂಚು ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ಸಿಎಂ ಮೇಲೆ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯಪಾಲರು, ತಮಗೆ ದೈಹಿಕವಾಗಿ ಘಾಸಿ ಉಂಟುಮಾಡಲು ಸಂಘಟಿತ ಪ್ರಯತ್ನ ನಡೆಯುತ್ತಿದೆ. ತಮ್ಮನ್ನು ವ್ಯಕ್ತಿಗತವಾಗಿ ಗುರಿ ಮಾಡುವ ಉದ್ದೇಶಪೂರ್ವಕ ಕೃತ್ಯ ಇದಾಗಿದ್ದು, ಇದರಲ್ಲಿ ಸ್ವತಃ ಸಿಎಂ ಪಿಣರಾಯಿ ವಿಜಯನ್ ಭಾಗಿಯಾಗಿರುವುದನ್ನು ಇದು ಸೂಚಿಸುತ್ತದೆ ಎಂದು ಅವರು ದೂರಿದರು.

ಆಡಳಿತಾರೂಢ ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕ, ಎಸ್‌ಎಫ್‌ಐ (ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ) ಸದಸ್ಯರ ನಡುವಿನ ಗುಂಪು ಘರ್ಷಣೆ ವೇಳೆ, ಎರಡು ಗುಂಪುಗಳ ನಡುವೆ ರಾಜ್ಯಪಾಲರ ವಾಹನ ಸಿಲುಕಿಕೊಂಡಿತ್ತು. ರಾಜ್ಯಪಾಲರ ವಾಹನದ ಮೇಲೆ ಕೆಲವು ಕಾರ್ಯಕರ್ತರು ವ್ಯವಸ್ಥಿತವಾಗಿ ದಾಳಿ ನಡೆಸಿದ್ದರು ಎಂದು ಆರಿಫ್ ಖಾನ್ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನವದೆಹಲಿಗೆ ತೆರಳು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಇದು ಸದ್ಯ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಠಿಸಿದೆ.

ಸಿಎಂ ಕಾರ್ಯಕ್ರಮ ನಡೆಯುವ ವೇಳೆ ಬೇರೆ ಯಾವುದೇ ಪ್ರತಿಭಟನೆ ನಡೆಯಲು ಪೊಲೀಸರು ಬಿಡುತ್ತಾರೆಯೇ? ಸಿಎಂ ಕಾರಿನ ಬಳಿ ಯಾರಿಗಾದರು ಬರಲು ಪೊಲೀಸರು ಬಿಡುವರೇ? ಆದರೆ ನಮ್ಮ ಕಾರಿನ ಮೇಲೆ ದಾಳಿ ನಡೆದರೂ ಪೊಲೀಸರು ಸುಮ್ಮಿದ್ದದ್ದು ಯಾಕೆ? ನಾನು ಇದನ್ನು ಸ್ಪಷ್ಟವಾಗಿ ಹೇಳುತ್ತೇನೆ, ನನಗೆ ದೈಹಿಕವಾಗಿ ಘಾಸಿ ಮಾಡಲು ಸಂಚು ರೂಪಿಸಿರುವ ಸಿಎಂ ಜನರನ್ನು ಕಳುಹಿಸಿದ್ದಾರೆ. ತಮ್ಮ ಕಾರಿನ ಮೇಲಿನ ದಾಳಿ ಕೇರಳದಲ್ಲಿ ಪ್ರಜಾಪ್ರಭುತ್ವ ಕುಸಿತಕ್ಕೆ ಕಾರಣವಾಗಬಹುದು ಮತ್ತು ರಾಜಕೀಯ ಬಿನ್ನಾಭಿಪ್ರಾಯಗಳು ದೈಹಿಕ ದ್ವೇಷಕ್ಕೆ ಪುಷ್ಠಿ ನೀಡಬಹುದಾಗಿದೆ ಎಂದು ದೂರಿದ್ದಾರೆ.

ಒಂದು ನಿರ್ದಿಷ್ಟ ಜಾಗದಲ್ಲಿ ರಾಜ್ಯಪಾಲ ಖಾನ್ ಅವರ ವಾಹನಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಸಂಘಟನೆಯ ಏಳು ಮಂದಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

4 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

13 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

23 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago