ರಾಷ್ಟ್ರೀಯ

ನನ್ನ ಮೇಲೆ ದಾಳಿಗೆ ಸಿಎಂ ಪಿಣರಾಯಿ ಸಂಚು: ಕೇರಳ ರಾಜ್ಯಪಾಲ ಗಂಭೀರ ಆರೋಪ

ತಿರುವನಂತಪುರಂ : ತಮಗೆ ದೈಹಿಕವಾಗಿ ಹಾನಿ ಮಾಡಲು ಪಿಣರಾಯಿ ವಿಜಯನ್ ಅವರು ಸಂಚು ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳ ಸಿಎಂ ಮೇಲೆ ಸೋಮವಾರ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ರಾಜ್ಯಪಾಲರು, ತಮಗೆ ದೈಹಿಕವಾಗಿ ಘಾಸಿ ಉಂಟುಮಾಡಲು ಸಂಘಟಿತ ಪ್ರಯತ್ನ ನಡೆಯುತ್ತಿದೆ. ತಮ್ಮನ್ನು ವ್ಯಕ್ತಿಗತವಾಗಿ ಗುರಿ ಮಾಡುವ ಉದ್ದೇಶಪೂರ್ವಕ ಕೃತ್ಯ ಇದಾಗಿದ್ದು, ಇದರಲ್ಲಿ ಸ್ವತಃ ಸಿಎಂ ಪಿಣರಾಯಿ ವಿಜಯನ್ ಭಾಗಿಯಾಗಿರುವುದನ್ನು ಇದು ಸೂಚಿಸುತ್ತದೆ ಎಂದು ಅವರು ದೂರಿದರು.

ಆಡಳಿತಾರೂಢ ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕ, ಎಸ್‌ಎಫ್‌ಐ (ಸ್ಟುಡೆಂಟ್ ಫೆಡರೇಷನ್ ಆಫ್ ಇಂಡಿಯಾ) ಸದಸ್ಯರ ನಡುವಿನ ಗುಂಪು ಘರ್ಷಣೆ ವೇಳೆ, ಎರಡು ಗುಂಪುಗಳ ನಡುವೆ ರಾಜ್ಯಪಾಲರ ವಾಹನ ಸಿಲುಕಿಕೊಂಡಿತ್ತು. ರಾಜ್ಯಪಾಲರ ವಾಹನದ ಮೇಲೆ ಕೆಲವು ಕಾರ್ಯಕರ್ತರು ವ್ಯವಸ್ಥಿತವಾಗಿ ದಾಳಿ ನಡೆಸಿದ್ದರು ಎಂದು ಆರಿಫ್ ಖಾನ್ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನವದೆಹಲಿಗೆ ತೆರಳು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಇದು ಸದ್ಯ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಠಿಸಿದೆ.

ಸಿಎಂ ಕಾರ್ಯಕ್ರಮ ನಡೆಯುವ ವೇಳೆ ಬೇರೆ ಯಾವುದೇ ಪ್ರತಿಭಟನೆ ನಡೆಯಲು ಪೊಲೀಸರು ಬಿಡುತ್ತಾರೆಯೇ? ಸಿಎಂ ಕಾರಿನ ಬಳಿ ಯಾರಿಗಾದರು ಬರಲು ಪೊಲೀಸರು ಬಿಡುವರೇ? ಆದರೆ ನಮ್ಮ ಕಾರಿನ ಮೇಲೆ ದಾಳಿ ನಡೆದರೂ ಪೊಲೀಸರು ಸುಮ್ಮಿದ್ದದ್ದು ಯಾಕೆ? ನಾನು ಇದನ್ನು ಸ್ಪಷ್ಟವಾಗಿ ಹೇಳುತ್ತೇನೆ, ನನಗೆ ದೈಹಿಕವಾಗಿ ಘಾಸಿ ಮಾಡಲು ಸಂಚು ರೂಪಿಸಿರುವ ಸಿಎಂ ಜನರನ್ನು ಕಳುಹಿಸಿದ್ದಾರೆ. ತಮ್ಮ ಕಾರಿನ ಮೇಲಿನ ದಾಳಿ ಕೇರಳದಲ್ಲಿ ಪ್ರಜಾಪ್ರಭುತ್ವ ಕುಸಿತಕ್ಕೆ ಕಾರಣವಾಗಬಹುದು ಮತ್ತು ರಾಜಕೀಯ ಬಿನ್ನಾಭಿಪ್ರಾಯಗಳು ದೈಹಿಕ ದ್ವೇಷಕ್ಕೆ ಪುಷ್ಠಿ ನೀಡಬಹುದಾಗಿದೆ ಎಂದು ದೂರಿದ್ದಾರೆ.

ಒಂದು ನಿರ್ದಿಷ್ಟ ಜಾಗದಲ್ಲಿ ರಾಜ್ಯಪಾಲ ಖಾನ್ ಅವರ ವಾಹನಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಸಂಘಟನೆಯ ಏಳು ಮಂದಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

23 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago