ನವದೆಹಲಿ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ಜರುಗಿತು. ಹಿರಿಯ ನಾಯಕ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸಭೆ ಬಳಿಕ ಮಾತನಾಡಿದ ಪಿ. ಚಿದಂಬರಂ, ಇದು ಪ್ರಣಾಳಿಕೆ ಸಮಿತಿಯ ಮೊದಲ ಸಭೆ. ಮುಂದಿನ ವಾರ ಮತ್ತೆ ಭೇಟಿಯಾಗಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಯಾವುದನ್ನೂ ನಿರ್ಧರಿಸಲಾಗಿಲ್ಲ. ಸಭೆಯಲ್ಲಿ ಪ್ರಾಥಮಿಕ ಆಲೋಚನೆಗಳು, ಚಿಂತನೆಗಳ ವಿನಿಮಯವಾಯಿತು ಹಾಗೂ ಪ್ರಣಾಳಿಕೆ ಕರಡನ್ನು ಹೇಗೆ ಸಿದ್ಧಪಡಿಸಬೇಕು ಎಂಬುದರ ಕುರಿತು ಚರ್ಚೆ ನಡೆಯಿತು ಎಂದು ತಿಳಿಸಿದರು.
ಕಾಂಗ್ರೆಸ್ ಸಂಸದ ಶಶಿ ತರೂರ್ ಮಾತನಾಡಿ, ಏನೂ ನಿರ್ಧರವಾಗಿಲ್ಲ. ನಾವು ಅತ್ಯುತ್ತಮ ಪ್ರಣಾಳಿಕೆ ರೂಪಿಸುವ ವಿಶ್ವಾಸವಿದೆ. ಜನರು ಮಾತನಾಡುವ ಪ್ರಣಾಳಿಕೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ಸಭೆ ಜನವರಿ 11 ರಂದು ವರ್ಚುಯಲ್ ನಲ್ಲಿ ನಡೆಯಲಿದೆ.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…