ನವದೆಹಲಿ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ಜರುಗಿತು. ಹಿರಿಯ ನಾಯಕ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸಭೆ ಬಳಿಕ ಮಾತನಾಡಿದ ಪಿ. ಚಿದಂಬರಂ, ಇದು ಪ್ರಣಾಳಿಕೆ ಸಮಿತಿಯ ಮೊದಲ ಸಭೆ. ಮುಂದಿನ ವಾರ ಮತ್ತೆ ಭೇಟಿಯಾಗಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಯಾವುದನ್ನೂ ನಿರ್ಧರಿಸಲಾಗಿಲ್ಲ. ಸಭೆಯಲ್ಲಿ ಪ್ರಾಥಮಿಕ ಆಲೋಚನೆಗಳು, ಚಿಂತನೆಗಳ ವಿನಿಮಯವಾಯಿತು ಹಾಗೂ ಪ್ರಣಾಳಿಕೆ ಕರಡನ್ನು ಹೇಗೆ ಸಿದ್ಧಪಡಿಸಬೇಕು ಎಂಬುದರ ಕುರಿತು ಚರ್ಚೆ ನಡೆಯಿತು ಎಂದು ತಿಳಿಸಿದರು.
ಕಾಂಗ್ರೆಸ್ ಸಂಸದ ಶಶಿ ತರೂರ್ ಮಾತನಾಡಿ, ಏನೂ ನಿರ್ಧರವಾಗಿಲ್ಲ. ನಾವು ಅತ್ಯುತ್ತಮ ಪ್ರಣಾಳಿಕೆ ರೂಪಿಸುವ ವಿಶ್ವಾಸವಿದೆ. ಜನರು ಮಾತನಾಡುವ ಪ್ರಣಾಳಿಕೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ಸಭೆ ಜನವರಿ 11 ರಂದು ವರ್ಚುಯಲ್ ನಲ್ಲಿ ನಡೆಯಲಿದೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…