ರಾಷ್ಟ್ರೀಯ

ಜಾತಿ ಗಣತಿಯನ್ನು ಜನಗಣತಿಯೊಂದಿಗೆ ಸಂಯೋಜಿಸಿ: ಪ್ರಧಾನಿಗೆ ಸಿಎಂ ಸ್ಟಾಲಿನ್ ಮನವಿ

ಚೆನೈ: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಈ ನಿರ್ಣಾಯಕ ಜಾತಿ ಗಣತಿಯ ಫಲಿತಾಂಶ ದೇಶದ ಕೋಟ್ಯಂತರ ಅರ್ಹ ಜನರ ಬದುಕಿಗೆ ನೆರವಾಗಲಿದೆ. ಇದು ಇನ್ನಷ್ಟು ವಿಳಂಬ ಆಗಬಾರದು ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 20ರಂದು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಟಾಲಿನ್, ‘‘ಈ ಜಾತಿ ಗಣತಿಯು ಅಭಿವೃದ್ಧಿಯ ಲಾಭವನ್ನು ಅತ್ಯಂತ ದುರ್ಬಲ ವರ್ಗಗಳಿಗೆ ತಲುಪಿಸುವಲ್ಲಿ ಹಾಗೂ ಹೆಚ್ಚು ಬಲಿಷ್ಠ, ಎಲ್ಲರನ್ನೂ ಒಳಗೊಂಡ ಭಾರತವನ್ನು ನಿರ್ಮಾಣ ಮಾಡುವಲ್ಲಿ ಸ್ಮರಣೀಯ ಹೆಜ್ಜೆಯಾಗಬಹುದು ಎಂಬುದರಲ್ಲಿ ನನಗೆ ಯಾವುದೇ ಸಂದೇಹ ಇಲ್ಲ’’ ಎಂದಿದ್ದಾರೆ.

ಬಿಹಾರದಂತಹ ಕೆಲವು ರಾಜ್ಯಗಳಲ್ಲಿ ಸರಕಾರಗಳು ಜಾತಿ ಜನಗಣತಿ ನಡೆಸಿವೆ. ಇನ್ನು ಕೆಲವು ರಾಜ್ಯಗಳು ಜಾತಿಗಣತಿ ನಡೆಸುವುದಾಗಿ ಘೋಷಿಸಿವೆ. ಈ ನಿರ್ದಿಷ್ಟ ರಾಜ್ಯಗಳ ಜಾತಿಗಣತಿ, ಅದರ ದತ್ತಾಂಶದ ಫಲಿತಾಂಶಗಳು ಸಮಾಜ ಹಾಗೂ ಅದರ ಅಗತ್ಯತೆಗಳನ್ನು ಪೂರೈಸುವಲ್ಲಿ ತುಂಬಾ ಉಪಯುಕ್ತ ಒಳನೋಟಗಳನ್ನು ನೀಡಲಿದೆ. ಆದರೆ ಇದು ರಾಷ್ಟ್ರ ವ್ಯಾಪಿ ದತ್ತಾಂಶದ ತುಲನೆ ಹಾಗೂ ಪರಿಷ್ಕರಣೆಯಲ್ಲಿ ಕೊರತೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸಿದರೆ ಮಾತ್ರವೇ ಸಮಾಜದ ಜಾತಿ ಸಂಯೋಜನೆ ಹಾಗೂ ಸಾಮಾಜಿಕ-ಆರ್ಥಿಕತೆಯ ಸೂಚಕದ ಮೇಲೆ ಅದರ ಪ್ರತಿಫಲನದ ಬಗ್ಗೆ ಸಮಗ್ರ ಹಾಗೂ ವಿಶ್ವಾಸಾರ್ಹ ದತ್ತಾಂಶವನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದರು.

ಕಳೆದ 90 ವರ್ಷಗಳಲ್ಲಿ ದೇಶದ ಜನಸಂಖ್ಯೆ ಹಾಗೂ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಅನೇಕ ಬದಲಾವಣೆಗೆ ಒಳಗಾಗಿವೆ. ಆದರೆ, ಹಲವು ನೀತಿಗಳ ಹೊರತಾಗಿಯು ಸಮಾಜದ ದುರ್ಬಲ ವರ್ಗ ಈಗಲೂ ಹಿಂದುಳಿದಿದೆ ಎಂದು ಸ್ಟಾಲಿನ್ ಅವರು ಪತ್ರದಲ್ಲಿ ಹೇಳಿದ್ದಾರೆ.

andolanait

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

17 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

34 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

60 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago