ರಾಷ್ಟ್ರೀಯ

ಜಾತಿ ಗಣತಿಯನ್ನು ಜನಗಣತಿಯೊಂದಿಗೆ ಸಂಯೋಜಿಸಿ: ಪ್ರಧಾನಿಗೆ ಸಿಎಂ ಸ್ಟಾಲಿನ್ ಮನವಿ

ಚೆನೈ: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಈ ನಿರ್ಣಾಯಕ ಜಾತಿ ಗಣತಿಯ ಫಲಿತಾಂಶ ದೇಶದ ಕೋಟ್ಯಂತರ ಅರ್ಹ ಜನರ ಬದುಕಿಗೆ ನೆರವಾಗಲಿದೆ. ಇದು ಇನ್ನಷ್ಟು ವಿಳಂಬ ಆಗಬಾರದು ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 20ರಂದು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಟಾಲಿನ್, ‘‘ಈ ಜಾತಿ ಗಣತಿಯು ಅಭಿವೃದ್ಧಿಯ ಲಾಭವನ್ನು ಅತ್ಯಂತ ದುರ್ಬಲ ವರ್ಗಗಳಿಗೆ ತಲುಪಿಸುವಲ್ಲಿ ಹಾಗೂ ಹೆಚ್ಚು ಬಲಿಷ್ಠ, ಎಲ್ಲರನ್ನೂ ಒಳಗೊಂಡ ಭಾರತವನ್ನು ನಿರ್ಮಾಣ ಮಾಡುವಲ್ಲಿ ಸ್ಮರಣೀಯ ಹೆಜ್ಜೆಯಾಗಬಹುದು ಎಂಬುದರಲ್ಲಿ ನನಗೆ ಯಾವುದೇ ಸಂದೇಹ ಇಲ್ಲ’’ ಎಂದಿದ್ದಾರೆ.

ಬಿಹಾರದಂತಹ ಕೆಲವು ರಾಜ್ಯಗಳಲ್ಲಿ ಸರಕಾರಗಳು ಜಾತಿ ಜನಗಣತಿ ನಡೆಸಿವೆ. ಇನ್ನು ಕೆಲವು ರಾಜ್ಯಗಳು ಜಾತಿಗಣತಿ ನಡೆಸುವುದಾಗಿ ಘೋಷಿಸಿವೆ. ಈ ನಿರ್ದಿಷ್ಟ ರಾಜ್ಯಗಳ ಜಾತಿಗಣತಿ, ಅದರ ದತ್ತಾಂಶದ ಫಲಿತಾಂಶಗಳು ಸಮಾಜ ಹಾಗೂ ಅದರ ಅಗತ್ಯತೆಗಳನ್ನು ಪೂರೈಸುವಲ್ಲಿ ತುಂಬಾ ಉಪಯುಕ್ತ ಒಳನೋಟಗಳನ್ನು ನೀಡಲಿದೆ. ಆದರೆ ಇದು ರಾಷ್ಟ್ರ ವ್ಯಾಪಿ ದತ್ತಾಂಶದ ತುಲನೆ ಹಾಗೂ ಪರಿಷ್ಕರಣೆಯಲ್ಲಿ ಕೊರತೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸಿದರೆ ಮಾತ್ರವೇ ಸಮಾಜದ ಜಾತಿ ಸಂಯೋಜನೆ ಹಾಗೂ ಸಾಮಾಜಿಕ-ಆರ್ಥಿಕತೆಯ ಸೂಚಕದ ಮೇಲೆ ಅದರ ಪ್ರತಿಫಲನದ ಬಗ್ಗೆ ಸಮಗ್ರ ಹಾಗೂ ವಿಶ್ವಾಸಾರ್ಹ ದತ್ತಾಂಶವನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದರು.

ಕಳೆದ 90 ವರ್ಷಗಳಲ್ಲಿ ದೇಶದ ಜನಸಂಖ್ಯೆ ಹಾಗೂ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಅನೇಕ ಬದಲಾವಣೆಗೆ ಒಳಗಾಗಿವೆ. ಆದರೆ, ಹಲವು ನೀತಿಗಳ ಹೊರತಾಗಿಯು ಸಮಾಜದ ದುರ್ಬಲ ವರ್ಗ ಈಗಲೂ ಹಿಂದುಳಿದಿದೆ ಎಂದು ಸ್ಟಾಲಿನ್ ಅವರು ಪತ್ರದಲ್ಲಿ ಹೇಳಿದ್ದಾರೆ.

andolanait

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

11 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

11 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

16 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago