ರಾಷ್ಟ್ರೀಯ

ಜಾತಿ ಗಣತಿಯನ್ನು ಜನಗಣತಿಯೊಂದಿಗೆ ಸಂಯೋಜಿಸಿ: ಪ್ರಧಾನಿಗೆ ಸಿಎಂ ಸ್ಟಾಲಿನ್ ಮನವಿ

ಚೆನೈ: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.

ಈ ನಿರ್ಣಾಯಕ ಜಾತಿ ಗಣತಿಯ ಫಲಿತಾಂಶ ದೇಶದ ಕೋಟ್ಯಂತರ ಅರ್ಹ ಜನರ ಬದುಕಿಗೆ ನೆರವಾಗಲಿದೆ. ಇದು ಇನ್ನಷ್ಟು ವಿಳಂಬ ಆಗಬಾರದು ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 20ರಂದು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಟಾಲಿನ್, ‘‘ಈ ಜಾತಿ ಗಣತಿಯು ಅಭಿವೃದ್ಧಿಯ ಲಾಭವನ್ನು ಅತ್ಯಂತ ದುರ್ಬಲ ವರ್ಗಗಳಿಗೆ ತಲುಪಿಸುವಲ್ಲಿ ಹಾಗೂ ಹೆಚ್ಚು ಬಲಿಷ್ಠ, ಎಲ್ಲರನ್ನೂ ಒಳಗೊಂಡ ಭಾರತವನ್ನು ನಿರ್ಮಾಣ ಮಾಡುವಲ್ಲಿ ಸ್ಮರಣೀಯ ಹೆಜ್ಜೆಯಾಗಬಹುದು ಎಂಬುದರಲ್ಲಿ ನನಗೆ ಯಾವುದೇ ಸಂದೇಹ ಇಲ್ಲ’’ ಎಂದಿದ್ದಾರೆ.

ಬಿಹಾರದಂತಹ ಕೆಲವು ರಾಜ್ಯಗಳಲ್ಲಿ ಸರಕಾರಗಳು ಜಾತಿ ಜನಗಣತಿ ನಡೆಸಿವೆ. ಇನ್ನು ಕೆಲವು ರಾಜ್ಯಗಳು ಜಾತಿಗಣತಿ ನಡೆಸುವುದಾಗಿ ಘೋಷಿಸಿವೆ. ಈ ನಿರ್ದಿಷ್ಟ ರಾಜ್ಯಗಳ ಜಾತಿಗಣತಿ, ಅದರ ದತ್ತಾಂಶದ ಫಲಿತಾಂಶಗಳು ಸಮಾಜ ಹಾಗೂ ಅದರ ಅಗತ್ಯತೆಗಳನ್ನು ಪೂರೈಸುವಲ್ಲಿ ತುಂಬಾ ಉಪಯುಕ್ತ ಒಳನೋಟಗಳನ್ನು ನೀಡಲಿದೆ. ಆದರೆ ಇದು ರಾಷ್ಟ್ರ ವ್ಯಾಪಿ ದತ್ತಾಂಶದ ತುಲನೆ ಹಾಗೂ ಪರಿಷ್ಕರಣೆಯಲ್ಲಿ ಕೊರತೆಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತಾವಿತ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸಿದರೆ ಮಾತ್ರವೇ ಸಮಾಜದ ಜಾತಿ ಸಂಯೋಜನೆ ಹಾಗೂ ಸಾಮಾಜಿಕ-ಆರ್ಥಿಕತೆಯ ಸೂಚಕದ ಮೇಲೆ ಅದರ ಪ್ರತಿಫಲನದ ಬಗ್ಗೆ ಸಮಗ್ರ ಹಾಗೂ ವಿಶ್ವಾಸಾರ್ಹ ದತ್ತಾಂಶವನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದರು.

ಕಳೆದ 90 ವರ್ಷಗಳಲ್ಲಿ ದೇಶದ ಜನಸಂಖ್ಯೆ ಹಾಗೂ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಅನೇಕ ಬದಲಾವಣೆಗೆ ಒಳಗಾಗಿವೆ. ಆದರೆ, ಹಲವು ನೀತಿಗಳ ಹೊರತಾಗಿಯು ಸಮಾಜದ ದುರ್ಬಲ ವರ್ಗ ಈಗಲೂ ಹಿಂದುಳಿದಿದೆ ಎಂದು ಸ್ಟಾಲಿನ್ ಅವರು ಪತ್ರದಲ್ಲಿ ಹೇಳಿದ್ದಾರೆ.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

8 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

10 hours ago